Webdunia - Bharat's app for daily news and videos

Install App

ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ

Webdunia
ಭಾನುವಾರ, 10 ಅಕ್ಟೋಬರ್ 2021 (21:54 IST)
ಬೆಂಗಳೂರು: ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಿದ್ದು, ಕೆಲವೆಡೆ ಕೆರೆಗಳು ಭರ್ತಿಯಾಗಿವೆ.
ದಾವಣಗೆರೆ ತಾಲೂಕಿನ ಆನಗೋಡು ಗ್ರಾಮದ ಕೆರೆಯಲ್ಲಿ ಕಳೆದ ಐವತ್ತು ವರ್ಷಗಳಿಂದ ಹನಿ ನೀರಿರಲಿಲ್ಲ. ಕಳೆದ ಐದಾರು ದಿನಗಳಿಂದ ಮಳೆಯಾಗುತ್ತಿದ್ದು, ಕೆರೆ ಭರ್ತಿಯಾಗಿದೆ. ಕೊಪ್ಪಳ ದಲ್ಲಿ ಸಜ್ಜೆ ಬೆಳೆಯು ಮಳೆ -  ಗಾಳಿಯಿಂದ ನೆಲಕ್ಕೆ ಉರುಳಿದೆ.
ಯಾದಗಿರಿಯ ಮೋಟ್ನಳ್ಳಿ ಗ್ರಾಮದಲ್ಲಿ ಮಳೆಗೆ ನಾಲ್ಕೈದು ಮನೆಗಳು ಕುಸಿದಿವೆ. ಕೆಲ ಮನೆಗಳು ಭಾಗಶಃ ಹಾನಿಯಾಗಿವೆ. ಹೊಲಗಳಿಗೆ ಮಳೆ ನೀರು ನುಗ್ಗಿ ಭತ್ತ, ಹತ್ತಿ, ಶೇಂಗಾ ಬೆಳೆಗಳು ನಾಶವಾಗಿವೆ.
 
ಭಾನುವಾರ ಕಲಬುರಗಿ ಮಹಾನಗರ ಸೇರಿದಂತೆ ತಾಲೂಕಿನ ವಿವಿಧೆಡೆ ವರುಣ ಆರ್ಭರ್ ಮುಂದುವರಿದಿದೆ. ನಗರದ ಬ್ರಹ್ಮಪುರ, ಲಾಳಗೇರಿ ಕ್ರಾಸ್, ಸೋನಿಯಾ ಗಾಂಧಿ ಕಾಲೊನಿ, ಶಾಂತಿನಗರ, ಪ್ರಶಾಂತ ನಗರ, ವೆಂಕಟೇಶ್ವರ ನಗರ, ಎಸ್.ಬಿ. ಟೆಂಪಲ್, ಗುಲಾಬವಾಡಿ, ಎಪಿಎಂಸಿ ಪ್ರದೇಶ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ.  ಚರಂಡಿಗಳು ತುಂಬಿಕೊಂಡು ಕೊಚ್ಚೆ ಸಮೇತ ಮಳೆ ನೀರು ರಸ್ತೆಗಳ ಮೇಲೆ ಹೊಳೆಯಂತೆ ಹರಿಯಿತು.
ಉಕ್ಕೇರಿದ ಮುಲ್ಲಾಮಾರಿ ನದಿ:
ಚಿಂಚೋಳಿ ತಾಲೂಕಿನಲ್ಲಿ ನಾಲ್ಕೈದು ದಿನಗಳಿಂದ  ನಿರಂತರವಾಗಿ ಮಳೆ ಸುರಿದಿದೆ. ಇದರಿಂದ ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗಿದೆ. ನೀರಿನ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ನಾಗರಾಳ ಜಲಾಶಯದಿಂದ ನದಿಗೆ ನೀರು ಬಿಡಲಾಗಿದೆ. ಇದರಿಂದ ಮುಲ್ಲಾಮಾರಿ ನದಿಯಲ್ಲಿ ಪ್ರವಾಹ ಭೀತಿ ಉಂಟಾಗಿದೆ. 
ಎರಡು ದಿನ ಭಾರೀ ಮಳೆ:
ಸೋಮವಾರ ಮತ್ತು ಮಂಗಳವಾರ ಉತ್ತರ ಕನ್ನಡ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ ದಾವಣಗೆರೆ ಜಿಲ್ಲೆಯ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments