Webdunia - Bharat's app for daily news and videos

Install App

ಹೆಬ್ಬಾಳ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಖಾಸಗಿ ಫೋಟೋ ವೈರಲ್

Webdunia
ಶುಕ್ರವಾರ, 7 ಏಪ್ರಿಲ್ 2023 (20:30 IST)
ಬಿಜೆಪಿಯಿಂದ ಚುನಾವಣಾ ಟಿಕೆಟ್ ಘೋಷಣೆ ಸಮೀಪದಲ್ಲಿರುವಾಗಲೇ ಮಾಜಿ ಸಚಿವ, ಹೆಬ್ಬಾಳ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡುರ ಖಾಸಗಿ ಫೋಟೋ ವೈರಲ್ ಆಗಿದೆ. ಇನ್ನೆರಡು ದಿನಗಳಲ್ಲಿ‌ ಬಿಜೆಪಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡುರ ಫೋಟೋ ವೈರಲ್ ಆಗಿರುವುದು ಚರ್ಚೆಗೆ ಗ್ರಾಸವಾಗಿದೆ.ಮಾತ್ರವಲ್ಲ 
ಕಟ್ಟಾಗೆ ಟಿಕೆಟ್ ಕೈತಪ್ಪಿಸಲು ವಿರೋಧಿಗಳು ಖಾಸಗಿ ಫೋಟೋವನ್ನ ಹರಿಬಿಟ್ಟಿದ್ದಾರಾ ಎಂಬ ಅನುಮಾನಕ್ಕೆ ಕಾರಣವಾಗಿದೆ.ಶರ್ಟ್ ಇಲ್ಲದೇ ಮನೆಯಲ್ಲಿ‌ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕುಳಿತಿರುವ ಫೋಟೋ ಹರಿಬಿಡಲಾಗಿದ್ದು, ಅಶ್ಲೀಲ ಫೋಟೋ ಕೂಡ ಇದಾಗಿಲ್ಲ. ಒಟ್ಟಿನಲ್ಲಿ ರಾಜಕೀಯ ದುರುದ್ದೇಶದಿಂದ ಟಿಕೆಟ್ ಕೈ ತಪ್ಪಿಸಲು ಈ ರೀತಿ ಮಾಡಲಾಗಿದೆ ಎಂದು ಕಟ್ಟಾ ಬೆಂಬಲಿಗರು ಮಾತನಾಡಿಕೊಳ್ಳುತ್ತಿದ್ದಾರೆ‌.
 
ವೈರಲ್ ಫೋಟೋ‌ ಕುರಿತು ಮಾತನಾಡಿದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, 'ಇದು ನನ್ನದೇ ಫೋಟೋ, ಆದರೆ ಅನಾರೋಗ್ಯದ ಕಾರಣಗಳಿಂದ ಕೆಲ ವರ್ಷಗಳಿಂದ ಫಿಸಿಯೋ ಥೆರಪಿ ಮಾಡಿಸುತ್ತಿದ್ದೇನೆ. ಆ ಸಂದರ್ಭದಲ್ಲಿನ ನನ್ನ ವೈಯಕ್ತಿಕವಾದ ಫೋಟೋ. ನನ್ನ ಮನೆಯೊಳಗೆ ನಾನು ಹಾಗೆ ಇದ್ದೇನೆ, ಆದರೆ ರಾಜಕೀಯ ವಿರೋಧಿಗಳು ಇದನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ. ವಿರೋಧಿಗಳು ಎಂದರೆ ಬೇರೆ ಯಾರೂ ಅಲ್ಲ ಕಾಂಗ್ರೆಸ್‌ನವರ ಕೈವಾಡ ಇದೆ' ಎಂದು ಆರೋಪಿಸಿದ್ದಾರೆ.
 
ನೇರವಾಗಿ ನನ್ನನ್ನ ಎದುರಿಸಲು ಸಾಧ್ಯವಾಗದ ಕಾಂಗ್ರೆಸ್ ನಾಯಕರು ಈ ರೀ‌ತಿ‌ಮಾಡಿದ್ದಾರೆ. ಕಾರ್ಯಕರ್ತರು ಯಾರೂ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ.ಚುನಾವಣೆಗೆ ಸಿದ್ಧರಾಗಿ ಎಂದು ಬೆಂಬಲಿಗರಿಗೆ ಕರೆ ನೀಡಿದ್ದಾರೆ‌.ಅಲ್ಲದೇ ಕಾನೂನು ತಜ್ಞರ ಸಲಹೆ ಪಡೆದಿರುವ ಕಟ್ಟಾ, ಸದಾಶಿವನಗರ ಠಾಣೆ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಿದ್ದೇನೆ' ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments