Webdunia - Bharat's app for daily news and videos

Install App

ಮಕ್ಕಳಿಗೆ ಎಂಪಿ ಟಿಕೆಟ್ ಕೊಡಿಸಲು ಹೆಬ್ಬಾಳ್ಕರ್-ಜಾರಕಿಹೊಳಿ ಫೈಟ್

Webdunia
ಸೋಮವಾರ, 4 ಸೆಪ್ಟಂಬರ್ 2023 (11:17 IST)
ಬೆಳಗಾವಿ : ಒಂದರ ಮೇಲೆ ಒಂದರಂತೆ ಗ್ಯಾರಂಟಿ ಜಾರಿಗೊಳಿಸಿ ಮುನ್ನುಗ್ಗುತ್ತಿರುವ ಸಿದ್ದು ಸರ್ಕಾರಕ್ಕೆ ಹೊಸ ಟೆನ್ಷನ್ ಶುರುವಾಗ್ತಿದೆ. ಮಂತ್ರಿ ಸ್ಥಾನ ಸಿಗದೇ ಕೆಲ ನಾಯಕರು ಬಹಿರಂಗ ಆಕ್ರೋಶ ಹೊರಹಾಕಿದರೆ. ಮತ್ತೊಂದೆಡೆ ಸಚಿವರಿಬ್ಬರ ಮಧ್ಯೆ ಶೀತಲ ಸಮರ ಶುರುವಾಗಿದೆ.

ರಾಜ್ಯದಲ್ಲಿ ಬೆಂಗಳೂರು ಬಿಟ್ಟರೆ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರ ಹೊಂದಿರುವುದು ಕುಂದಾನಗರಿ ಬೆಳಗಾವಿ ಜಿಲ್ಲೆ. ಬೆಳಗಾವಿ ರಾಜಕಾರಣ ನಿಯಂತ್ರಿಸುವುದಕ್ಕೆ ನಾಯಕರು ಪೈಪೋಟಿ ನಡೆಸುತ್ತಾರೆ.

ಇದೇ ವಿಚಾರವಾಗಿ ಸದ್ಯ ಸಿದ್ದು ಸರ್ಕಾರದಲ್ಲಿ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ಮಧ್ಯೆ ಶೀತಲ ಸಮರ ಶುರುವಾಗಿದೆ ಎನ್ನಲಾಗಿದೆ. ಲೋಕಸಭೆ ಚುನಾವಣೆಗೆ ಸಜ್ಜಾಗಿರುವ ರಾಜ್ಯ ಕಾಂಗ್ರೆಸ್ಗೆ ಇದು ಹೊಸ ತಲೆನೋವು ತಂದಿದೆ. 

ಅಷ್ಟಕ್ಕೂ ಈ ಇಬ್ಬರು ನಾಯಕರ ಶೀತಲ ಸಮರಕ್ಕೆ ಕಾರಣ ಮಕ್ಕಳ ರಾಜಕೀಯ ಭವಿಷ್ಯ ಎನ್ನಲಾಗಿದೆ. ತಮ್ಮ ಮಕ್ಕಳಿಗೆ ಬೆಳಗಾವಿ ಎಂಪಿ ಟಿಕೆಟ್ ಕೊಡಿಸಲು ಇಬ್ಬರು ನಾಯಕರು ಹಠಕ್ಕೆ ಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಪುತ್ರ ಮೃನಾಲ್ ಹೆಬ್ಬಾಳ್ಕರ್ಗೆ ಟಿಕೆಟ್ ಕೊಡಿಸಲು ಪ್ಲಾನ್ ಮಾಡಿದ್ದಾರೆ. ಅತ್ತ ಸಾಹುಕಾರ್ ಸತೀಶ್ ಜಾರಕಿಹೊಳಿ ತಮ್ಮ ಪುತ್ರಿ ಪ್ರಿಯಾಂಕಾರನ್ನ ಲೋಕಸಮರದ ಕಾಂಗ್ರೆಸ್ ಹುರಿಯಾಳು ಮಾಡಲು ತಂತ್ರ ಹೆಣೆಯುತ್ತಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ, ನಮ್ಮಲ್ಲಿ ಮುಸುಕಿನ ಗುದ್ದಾಟ ಅಂತೇನಿಲ್ಲ. ಯಾರಾದರೊಬ್ಬರು ಅಭ್ಯರ್ಥಿ ಆಗಲೇ ಬೇಕು? ಪ್ರಯತ್ನ ಮಾಡುತ್ತಿರುವುದು ನಿಜ ಎಂದಿದ್ದಾರೆ. ಇತ್ತ, ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃನಾಲ್, ಪಕ್ಷ ಹೇಳಿದರೆ ಸ್ಪರ್ಧಿಸಲು ಸಿದ್ಧ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿವೇಶನ ಆರಂಭಕ್ಕೆ ಮೊದಲೇ ಬಿಜೆಪಿ ಪ್ರತಿಭಟನೆ

ಧರ್ಮಸ್ಥಳದ ಬಗ್ಗೆ ಸದನದಲ್ಲೂ ಪ್ರಸ್ತಾಪ ಮಾಡ್ತೀವಿ ಎಂದ ಸಿಟಿ ರವಿ

ಪೊಲೀಸರಿಗೆ ಗೌರವ ಕೊಡೋದು ಹೇಗೆಂದು ಮೋದಿ ನೋಡಿ ಕಲಿಯಿರಿ: ಟ್ರೋಲ್ ಆದ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಮ್ಮ ನಾಶ ಮಾಡಿದ್ರೆ ಅರ್ಧ ಪ್ರಪಂಚವನ್ನೇ ಮುಳುಗಿಸ್ತೀವಿ: ಪಾಕ್ ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಬೆದರಿಕೆ

ಮುಂದಿನ ಸುದ್ದಿ
Show comments