ನಗರದಲ್ಲಿ ಕುಡಿಯುವ ನೀರಿಗೆ ಹಾಹಕಾರ

geetha
ಬುಧವಾರ, 14 ಫೆಬ್ರವರಿ 2024 (15:33 IST)
ಬೆಂಗಳೂರು-ಬೆಂಗಳೂರಿಗೆ ಬೇಸಿಗೆ ಕಾಲಿಡುತ್ತಿದ್ದಂತೆ ಕುಡಿಯುವ ನೀರಿಗೂ ಹಾಹಕಾರ ಶುರುವಾಗಿದೆ.ಬೋರ್ವೆಲ್ ಬತ್ತಿ ಹೋಗ್ತಿದ್ದು, ಕಾವೇರಿ‌ ನೀರು ಸರಿಯಾಗಿ ಬರ್ತಿಲ್ಲ.ಟ್ಯಾಂಕರ್ ನೀರಿಗೆ ಮೊರೆಹೋದ್ರೆ ಅದರ ದರ ಕೈಗೆಟಕುತ್ತಿಲ್ಲ.‌ಬೆಂಗಳೂರಿನ ಶುದ್ದ ಕುಡಿಯುವ ನೀರಿನ ಘಟಕಗಳಲ್ಲಿ ನೀರಿನ‌ ಕೊರತೆ ಕಾಡ್ತಿದೆ.ಬೋರ್ ವೆಲ್ ಬತ್ತಿ ಹೋಗಿ ಜನರ ಪರದಾಟ ನಡೆಸಿದ್ದಾರೆ ಹೀಗಾಗಿ ಬೆಂಗಳೂರಿನಲ್ಲಿರುವ ಹಲವು ಶುದ್ಧ ಕುಡಿಯುವ ನೀರಿನ ಘಟಕಗಳ ಮೇಲೆ ನಾಮಫ‌ಲಕ ಅಳವಡಿಕೆ ಮಾಡಲಾಗಿದೆ.
 
 ನೀರಿನ ಅಲಭ್ಯತೆ ಕುರಿತು ನಾಮಫ‌ಲಕ ಅಳವಡಿಕೆ ಮಾಡಿದ್ದು,ನೀರಿನ ಅಭಾವವಿರುವುದರಿಂದ ಪ್ರತಿದಿನ ಮಧ್ಯಾಹ್ನ 1 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಮುಚ್ಚಲಾಗುತ್ತದೆ. ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಲಭ್ಯವಿರುತ್ತದೆ ಮತ್ತು ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ನೀರಿನ ಲಭ್ಯತೆ ಇದೆ ಎಂಬ ಬೋರ್ಡ್ ಅಳವಡಿಕ ಮಾಡಲಾಗಿದೆ.ಮಳೆ ಕೊರೆತಯಿಂದ  ಕೊಳವೆಬಾವಿಗಳಲ್ಲಿ ಶುದ್ಧ ಘಟಕಗಳಿಗೆ ಬೇಕಾದಷ್ಟು ಪ್ರಮಾಣದಲ್ಲಿ ನೀರು ಪೂರೈಕೆಯಾಗುತ್ತಿಲ್ಲ.ಕೆಲವು ಶುದ್ದ ಕುಡಿಯುವ ನೀರಿನ ಘಟಕಗಳು ಈಗಾಗಲೇ ಮುಚ್ಚಿವೆ.ಇನ್ನೇನು ಫೆ.15ರಿಂದ ಬೇಸಿಗೆ ಕಾಲವು ಶುರುವಾಗಲಿದೆ.ಬೆಂಗಳೂರಿನ ಇನ್ನಷ್ಟು ಕುಡಿಯುವ ನೀರಿನ ಘಟಕಗಳು ಬಾಗಿಲು ಹಾಕುವ ಆತಂಕ ಶುರುವಾಗಿದೆ.
 
ರಾಜರಾಜೇಶ್ವರಿನಗರ, ಬ್ಯಾಟರಾಯನಪುರ, ಜಯನಗರ, ರಾಜಾಜಿನಗರ, ಯಶವಂತಪುರ, ಎಲೆಕ್ಟ್ರಾನಿಕ್‌ ಸಿಟಿ, ಮಡಿವಾಳ, ಯಲಹಂಕ, ಸರ್ಜಾಪುರ, ಮಾರತ್ತಹಳ್ಳಿ ಸೇರಿದಂತೆ ವಿವಿಧೆಡೆ ಬೇಡಿಕೆಗೆ ತಕ್ಕಷ್ಟು ಕುಡಿಯುವ ನೀರು ಸಿಗದೇ ಜನ ಸಾಮಾನ್ಯರು ಹೈರಾಣಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments