Webdunia - Bharat's app for daily news and videos

Install App

4 ವರ್ಷಗಳ ನಂತರ ಹೇಮಾವತಿ ಜಲಾಶಯ ಭರ್ತಿ

Webdunia
ಗುರುವಾರ, 12 ಜುಲೈ 2018 (15:54 IST)
ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹಾಸನ ಜಿಲ್ಲೆಯ ಜೀವನದಿ ಹೇಮಾವತಿ, ಭರ್ತಿ ಹಂತ ತಲುಪಿದೆ. ಬರೋಬ್ಬರಿ 4 ವರ್ಷಗಳ ನಂತರ ಜಲಾಶಯದ ಒಡಲು ತುಂಬಿಕೊಳ್ಳುತ್ತಿರುವುದು ಹೇಮೆಯನ್ನೇ ನಂಬಿರುವ ಅನ್ನದಾತರು ಹಾಗೂ ಲಕ್ಷಾಂತರ ಜನರಲ್ಲಿ ಅಪಾರ ಖುಷಿ ತರಿಸಿದೆ.

2922 ಅಡಿ ಗರಿಷ್ಠಮಟ್ಟದ ಜಲಾಶಯದಲ್ಲಿ ಇಂದು 2913 ಅಡಿ ನೀರಿದ್ದು, ವರ್ಷಧಾರೆ ಹೀಗೇ ಮುಂದುವರಿದರೆ ಒಂದೆರಡು ದಿನಗಳಲ್ಲಿ ಹೇಮೆ ಒಡಲು ತುಂಬಿಕೊಳ್ಳಲಿದ್ದಾಳೆ.  ಡ್ಯಾಂ ಭರ್ತಿಗೆ ಕೇವಲ 9 ಅಡಿ ನೀರು ಬರಬೇಕಿದೆ.  

ಯಾವುದೇ ಕ್ಷಣದಲ್ಲೂ ಕ್ರಸ್ಟ್ ಗೇಟ್ ಗಳ ಮೂಲಕ ನೀರು ಬಿಡುವ ಸಾಧ್ಯತೆಯಿದ್ದು, ನದಿಪಾತ್ರದ ಜನರಿಗೆ ಹೇಮಾವತಿ ಜಲಾಶಯದ ಅಧಿಕಾರಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದ್ದಾರೆ. ಮತ್ತೊಂದೆಡೆ ಮಲೆನಾಡು ಭಾಗದಲ್ಲಿ ಜೋರು ಮಳೆ ಮುಂದುವರಿದಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments