ಭೋರ್ಗರೆದ ಹೇಮಾವತಿ: ಕೋಟಿ ಕೋಟಿ ನಷ್ಟ

Webdunia
ಶನಿವಾರ, 10 ಆಗಸ್ಟ್ 2019 (16:45 IST)
ಹೇಮಗಿರಿ, ಬಂಡಿಹೊಳೆ ಹತ್ತಿರದಲ್ಲಿ ಹೇಮಾವತಿ ನದಿಯ ರುದ್ರನರ್ತನ ಮುಂದುವರಿದಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದೆ.

ಮಂಡ್ಯ ಜಿಲ್ಲೆಯ ಹೇಮಗಿರಿ, ಬಂಡಿಹೊಳೆ ಬಳಿ ಹೇಮಾವತಿ ನದಿಯ ರುದ್ರನರ್ತನ ಸಾಗಿದೆ. ಬಂಡಿಹೊಳೆ ಬಳಿ ತ್ರಿಶೂಲ್ ಜಲ ವಿದ್ಯುದಾಗಾರದೊಳಕ್ಕೆ ನುಗ್ಗಿದ ನೀರಿನಿಂದಾಗಿ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.

ಮಂಡ್ಯ ಹೇಮಗಿರಿ ಬಳಿ ತೆಪ್ಪೋತ್ಸವ ನಡೆಯುವ ಬೆಟ್ಟದ ಪಾದದವರೆಗೂ ಪ್ರವಾಹದ ನೀರು ನುಗ್ಗಿದೆ. ಹೇಮಾವತಿ ಅಣೆಕಟ್ಟಿನ ಮೇಲೆಯೂ ನೀರು ಭೋರ್ಗರೆಯುತ್ತಿದೆ.

ತಗ್ಗು ಪ್ರದೇಶಗಳಲ್ಲಿರುವ ಜಮೀನುಗಳಿಗೆ ನುಗ್ಗಿದ ನೀರಿನಿಂದಾಗಿ ತೆಂಗು, ಬಾಳೆ, ಅಡಿಕೆ, ಕಬ್ಬು ಬೆಳೆ ಮುಳುಗಡೆಯಾಗಿವೆ.
ಒಂದು ಲಕ್ಷ ಕ್ಯೂಸೆಕ್ಸ್ ನೀರು ಹರಿಸುವ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಇನ್ನೂ ಹೆಚ್ಚಾಗಲಿರುವ ಆತಂಕ ಮನೆಮಾಡಿದೆ.

ಬಂಡಿಹೊಳೆಯ ತ್ರಿಶೂಲ್ ಜಲವಿದ್ಯುತ್ ಘಟಕದೊಳಕ್ಕೆ ನೀರು ನುಗ್ಗಿ ಎರಡು ಟರ್ಬೈನ್ ಗಳು ಮುಳುಗಡೆಯಾಗಿವೆ.   
ನದಿ ದಡದಲ್ಲಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments