ಸರ್ಕಾರಿ ಕೆಲಸಕ್ಕಾಗಿ ಪ್ರಯತ್ನಿಸುವವರೇ ಈಕೆಯ ಟಾರ್ಗೆಟ್.!

Webdunia
ಬುಧವಾರ, 28 ಡಿಸೆಂಬರ್ 2022 (20:15 IST)
ಸರ್ಕಾರಿ ಕೆಲಸಕ್ಕಾಗಿ ಪ್ರಯತ್ನಿಸುವವರೇ ಈಕೆಯ ಟಾರ್ಗೆಟ್.! ತನಗೆ ಸರ್ಕಾರಿ ಅಧಿಕಾರಿಗಳು ಪ್ರಭಾವಿಗಳ ಪರಿಚಯವಿದೆ, ತಾನೂ ಪ್ರತಿಷ್ಠಿತ ಹುದ್ದೆಯಲ್ಲಿದ್ದೇನೆ ಎಂದು ನಂಬಿಸಿ, ಸರ್ಕಾರಿ ಹುದ್ದೆ ಕೊಡಿಸುವುದಾಗಿ ಲಕ್ಷ ಲಕ್ಷ ಹಣ ಪಡೆದು ಕೊನೆಗೆ ವಂಚಿಸುತ್ತಿದ್ದ ಮಹಿಳೆಯನ್ನ ಸಿದ್ಧಾಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಉಮಾದೇವಿ  ಬಂಧಿತ ಆರೋಪಿಯಾಗಿದ್ದು,
 
ಸತೀಶ್ ಎಂಬುವವರಿಗೆ ಪರಿಚಯವಾಗಿದ್ದ ಆರೋಪಿ 'ತಾನು ನಗರದ ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ನನಗೆ ಅನೇಕ ಪ್ರಭಾವಿಗಳ ಪರಿಚಯವಿದೆ. ನಿಮ್ಮ ಮಗನಿಗೆ ಕಾಲೇಜಿನಲ್ಲಿ ಸರ್ಕಾರಿ ಹುದ್ದೆ ಕೊಡಿಸುತ್ತೇನೆ' ಎಂದು ನಂಬಿಸಿದ್ದಳು. ಪ್ರತಿಯಾಗಿ ಸತೀಶ್ ರಿಂದ 6.55 ಲಕ್ಷ ರೂ ಹಣವನ್ನ ಪಡೆದಿದ್ದಳು. ಆದರೆ ಹಣ ಕೈ ಸೇರಿದ ಬಳಿಕ ಯಾವುದೇ ಕೆಲಸ ಕೊಡಿಸದೇ ವಂಚಿಸಿದ್ದಾಳೆ ಎಂದು ಸತೀಶ್ ಸಿದ್ಧಾಪುರ ಠಾಣೆಗೆ ದೂರು ನೀಡಿದ್ದರು.
 
ದೂರಿನನ್ವಯ ಕಾರ್ಯಾಚರಣೆ ಕೈಗೊಂಡ ಸಿದ್ಧಾಪುರ ಠಾಣಾ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಬಂಧಿತಳ ವಿರುದ್ಧ ಬೆಂಗಳೂರಿನ ಸಿ‌.ಕೆ.ಅಚ್ಚುಕಟ್ಟು, ಜಯನಗರ, ಸಿದ್ಧಾಪುರ, ಗಿರಿನಗರ, ಮಂಡ್ಯ ಜಿಲ್ಲೆಯ ಕೆರಗೋಡು ಠಾಣೆಗಳಲ್ಲಿ ಇದೇ ಮಾದರಿಯಲ್ಲಿ ಹಣ ಪಡೆದು ವಂಚಿಸಿರುವ ಪ್ರಕರಣಗಳಿರುವುದು ಪತ್ತೆಯಾಗಿದ್ದು ತನಿಖೆ ಮುಂದುವರೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಹಳಸಿದ ಸಂಬಂಧಕ್ಕೆ ತೇಪೆ ಹಾಕಲು ಬ್ರೇಕ್ ಫಾಸ್ಟ್ ಮೀಟಿಂಗ್: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ ತಂದ್ರೂ ಎಲ್ರೂ ಮೋದಿ ಮೋದಿ ಅಂತಾರೆ: ಸಿದ್ದರಾಮಯ್ಯ ಬೇಸರ

ಮುಂದಿನ ಸುದ್ದಿ
Show comments