Webdunia - Bharat's app for daily news and videos

Install App

ಈ ಗ್ರಾಮದ ಯುವಕರಿಗೆ ಹೆಣ್ಣು ಕೊಡಲು ಹಿಂದೇಟು? ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!

Webdunia
ಸೋಮವಾರ, 14 ಆಗಸ್ಟ್ 2023 (13:19 IST)
ಯಾದಗಿರಿ : ಜಿಲ್ಲೆಯ ಮುಂಡರಗಿ-ಬೆಳಗೇರಾ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಕಳೆದ ಎರಡು ವರ್ಷಗಳ ಹಿಂದೆ ಸಂಪೂರ್ಣ ಕೊಚ್ಚಿ ಹೋಗಿದ್ದು, ಈ ರಸ್ತೆಯಲ್ಲಿ ಬರುವಾಗ ಸ್ವಲ್ಪ ಯಾಮಾರಿದ್ರೂ ಜೀವಕ್ಕೆ ಕಂಟಕ ಕಟ್ಟಿಟ್ಟ ಬುತ್ತಿ ಎನ್ನುವಂತಾಗಿದೆ.
 
ಈಗಾಗಲೇ ಇದೇ ರಸ್ತೆಯಲ್ಲಿ ಪ್ರಯಾಣ ಮಾಡುವಾಗ ಹೆಂಡತಿ ಮನೆ ಬರುತ್ತಿದ್ದ ಇಬ್ಬರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದೇ ಕಾರಣಕ್ಕೆ ಈ ಊರುಗಳಿಗೆ ಹೆಣ್ಣು ಕೊಡಲು, ಹೆಣ್ಣು ತೆಗೆದುಕೊಳ್ಳಲು ಹಿಂದೇಟು ಹಾಕ್ತಿದ್ದಾರಂತೆ. ಅಲ್ಲದೇ ಗ್ರಾಮದಲ್ಲಿ ಯಾರಾದ್ರೂ ಸಂಬಂಧಿಕರು ತೀರಿಕೊಂಡ್ರೂ ಜನ ಬರೋದಕ್ಕೆ ಹಿಂದೆ-ಮುಂದೆ ನೋಡ್ತಿದ್ದಾರಂತೆ.

ಎರಡು ವರ್ಷಗಳ ಹಿಂದೆ ಸೇತುವೆ ಕೊಚ್ಚಿ ಹೋಗಿದ್ರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಜೀವ ಭಯಕ್ಕೆ ಹೆದರಿ ತಾತ್ಕಾಲಿಕವಾಗಿ ಬೇರೆಯವರ ಜಮೀನು ಮೂಲಕ ಬರುತ್ತಿದ್ದ ಬೆಳಗೇರಾ ಹಾಗೂ ಮುಂಡರಗಿ ಜನ ಕೆಸರು ತುಂಬಿದ ರಸ್ತೆಯಲ್ಲೇ ಎದ್ನೋ, ಬಿದ್ನೋ ಅಂತಾ ಭಯದಲ್ಲೇ ಓಡಾಡ್ತಿದ್ದಾರೆ. 

ಕಳೆದ ಎರಡು ವರ್ಷಗಳಿಂದ ಎರಡು ಗ್ರಾಮಗಳಿಗೆ ಓಡಾಡೋದಕ್ಕೆ ರಸ್ತೆ ಇಲ್ಲದ ಕಾರಣ ರೈತನೋರ್ವ ತನ್ನ ಜಮೀನಿನಲ್ಲೇ ಓಡಾಡೋದಕ್ಕೆ ರಸ್ತೆ ಮಾಡಿಕೊಟ್ಟಿದ್ದ. ಪಿಡಬ್ಲೂಡಿ ಅಧಿಕಾರಿಗಳು ಎಚ್ಚೆತ್ತುಕೊಳ್ಳದ ಕಾರಣಕ್ಕೆ ತಾತ್ಕಾಲಿಕ ರಸ್ತೆಯನ್ನ ರೈತ ಬಂದ್ ಮಾಡಿದ್ದಾನೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಾಮಳೆಗೆ ಮುಂಬೈ ತತ್ತರ: ಜನಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖವಾಡ ಕಳಚಿಬಿತ್ತು: ಇಷ್ಟು ದಿನದ ಶೋಧಕ್ಕೆ ಬಿಗ್ ಟ್ವಿಸ್ಟ್

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು: ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಾಧ್ಯತೆ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

ಮುಂದಿನ ಸುದ್ದಿ
Show comments