Webdunia - Bharat's app for daily news and videos

Install App

ಪ್ರಧಾನಿ ಮೋದಿ ಆಗಮನಕ್ಕೆ ಕ್ಷಣಗಣನೆ… ಮಂಗಳೂರು-ಧರ್ಮಸ್ಥಳದವರೆಗೆ ಹೈ ಅಲರ್ಟ್

Webdunia
ಶನಿವಾರ, 28 ಅಕ್ಟೋಬರ್ 2017 (17:09 IST)
ಮಂಗಳೂರು: ಇದೇ ಮೊದಲ ಬಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ  ನರೇಂದ್ರ ಮೋದಿ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸಂಚರಿಸುವ ಮಂಗಳೂರು, ಬೆಳ್ತಂಗಡಿ, ಉಜಿರೆ ರಸ್ತೆಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮೋದಿ ಆಗಮನಕ್ಕೂ ಮೊದಲು ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಎಎನ್ಎಫ್ ನ 25 ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದು, ಹತ್ತು ಮಂದಿ ಎಸ್ಪಿ ಶ್ರೇಣಿಯ ಅಧಿಕಾರಿಗಳು, ಡಿವೈಎಸ್ಪಿ ಮತ್ತು ಪಿಎಸ್ ಐ ದರ್ಜೆಯ ಅಧಿಕಾರಿಗಳು ಸೇರಿದಂತೆ 2 ಸಾವಿರಕ್ಕೂ ಅಧಿಕ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಅಲ್ಲಲ್ಲಿ ಬಾಂಬ್ ನಿಷ್ಕ್ರಿಯ ದಳ ಕೂಡಾ ತಪಾಸಣೆ ನಡೆಸುತ್ತಿದೆ. ಮೋದಿ ಪ್ರವಾಸದ ಹಿನ್ನೆಲೆಯಲ್ಲಿ ವಾಯುಪಡೆಯ ವಿಶೇಷ ವಿಮಾನದಲ್ಲಿ ಈಗಾಗಲೇ ಶಸ್ತ್ರಸಜ್ಜಿತ ಭದ್ರತಾ ಕಾರುಗಳು ಬಂದಿಳಿವೆ. ಧರ್ಮಸ್ಥಳ ಹಾಗೂ ಸಮಾರಂಭ ನಡೆಯುವ ಉಜಿರೆ ಮತ್ತು ಹೆಲಿಪ್ಯಾಡ್ ನಲ್ಲಿ ವಿಶೇಷ ಭದ್ರತಾ ಪಡೆ ನಿಯೋಜಿಸಲಾಗಿದ್ದು, ತಪಾಸಣಾ ಕಾರ್ಯ‌ ಮುಂದುವರೆದಿದೆ.

ತುಳುನಾಡ ಸಂಪ್ರದಾಯದಂತೆ ಧರ್ಮಸ್ಥಳವನ್ನು ಸುಂದರವಾಗಿ ಅಲಂಕರಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಇಂದಿನಿಂದ ನಾಳೆ ಮಧ್ಯಾಹ್ನ 2 ಗಂಟೆವರೆಗೆ ಭಕ್ತರಿಗೆ ಮಂಜುನಾಥ ದೇವರ ದರ್ಶನ ನಿರ್ಬಂಧಿಸಲಾಗಿದೆ. ಧರ್ಮಸ್ಥಳದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ ನಲ್ಲಿ ವಾಯುಸೇನಾ ಅಧಿಕಾರಿಗಳಿಂದ ಟ್ರಯಲ್ ರನ್ ಸಹ ಮಾಡಲಾಗಿದೆ.

ಮೋದಿಯವರು ಉಜಿರೆಯ ಶ್ರೀ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹನ್ನೆರಡು ಲಕ್ಷ ಸ್ವಸಹಾಯ ಸಂಘದ ಸದಸ್ಯರಿಗೆ ರುಪೇ ಕಾರ್ಡ್ ವಿತರಿಸಿ, ತಂತ್ರಾಂಶ ಆಧರಿತ  ಸ್ವಸಹಾಯ ಸಂಘ ನಿರ್ವಹಣೆ ಒಪ್ಪಂದ ವಿನಿಮಯ ಮತ್ತು ಭೂಮಿತಾಯಿಯನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ವರ್ಗಾಯಿಸುವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments