ಶ್ರೀರಂಗಪಟ್ಟಣದಲ್ಲಿ ಹೈ ಅಲರ್ಟ್!?

Webdunia
ಗುರುವಾರ, 2 ಜೂನ್ 2022 (08:06 IST)
ಮಂಡ್ಯ : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗದ ಮೆಟ್ಟಿಲೇರುವುದಕ್ಕೆ ಹಿಂದೂಪರ ಸಂಘಟನೆಗಳು ಕಾರ್ಯಪ್ರೌವೃತ್ತವಾಗಿವೆ.

ಇನ್ನೊಂದು ಕಡೆ ವಿಶ್ವ ಹಿಂದೂ ಪರಿಷತ್ ಜೂನ್ 4 ರಂದು ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಿದೆ. ಜಾಮಿಯಾ ಮಸೀದಿ ಈ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು, ಟಿಪ್ಪು ಸುಲ್ತಾನ್ ದೇವಸ್ಥಾನದ ಮೇಲೆ ಈ ಜಾಮಿಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ.

ಇಂದಿಗೂ ಜಾಮಿಯಾ ಮಸೀದಿಯಲ್ಲಿ ದೇವಸ್ಥಾನದ ಹಲವು ಕುರುಹುಗಳು ಇವೆ. ಇಲ್ಲಿ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದ ಗರ್ಭಗುಡಿ ಇದೆ ಈ ನಿಟ್ಟಿನಲ್ಲಿ ನಮಗೆ ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಜಿಲ್ಲಾಧಿಕಾರಿಗೆ ವಿಹೆಚ್ಪಿ ಮನವಿ ಸಲ್ಲಿಸಿತ್ತು.

ಜಿಲ್ಲಾಧಿಕಾರಿಗಳು ಈ ಮನವಿಗೆ ಪೂರಕವಾಗಿ ಸ್ಪಂದಿಸದ ಕಾರಣ ವಿಹೆಚ್ಪಿ ಹಾಗೂ ಭಜರಂಗ ದಳದ ಪದಾಧಿಕಾರಿಗಳು ಜೂನ್ 4 ರಂದು ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಿದ್ದಾರೆ. ಈ ಚಲೋದಲ್ಲಿ ಸಾವಿರಾರು ಮಂದಿ ಹನುಮನ ಭಕ್ತರು ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಅಂದು ಹನುಮ ಭಕ್ತರು ಮಸೀದಿಯ ಒಳಗಡೆ ಪ್ರವೇಶ ಮಾಡಿ ಆಂಜನೇಯಸ್ವಾಮಿ ಪೂಜೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments