ಜೆಡಿಎಸ್ ಜೊತೆ ಮೈತ್ರಿಗೆ ಹೈಕಮಾಂಡ್‌ಗೆ ಒಲವು

Webdunia
ಗುರುವಾರ, 14 ಸೆಪ್ಟಂಬರ್ 2023 (10:38 IST)
ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಜೆಡಿಎಸ್ ಜತೆ ಮೈತ್ರಿಗೆ ಹೈಕಮಾಂಡ್ ರೆಡಿಯಾಗಿದ್ದರೆ ರಾಜ್ಯ ಬಿಜೆಪಿ ಇನ್ನೂ ರೆಡಿಯಾಗಿಲ್ವಾ ಎಂಬ ಪ್ರಶ್ನೆ ಎದ್ದಿದೆ.

ರಾಜ್ಯ ನಾಯಕರಲ್ಲಿ ಕೆಲವರಿಗೆ ಮೈತ್ರಿ ಅಗತ್ಯ ಇಲ್ಲ ಎಂಬ ಭಾವನೆ ಇದೆ. ಮೈತ್ರಿಗೆ ಖುದ್ದು ಹೈಕಮಾಂಡ್ ಆಸಕ್ತಿ ತೋರುತ್ತಿರುವುದರಿಂದ ಅಸಮಾಧಾನಿತರು ಮೌನವಾಗಿದ್ದಾರೆ ಎನ್ನಲಾಗುತ್ತಿದೆ.

ಜೆಡಿಎಸ್ ಜತೆಗಿನ ಸ್ನೇಹಕ್ಕೆ ಕೆಲವರು ನಿರಾಸಕ್ತಿ ತೋರುತ್ತಿರುವ ವಿಚಾರ ಬಿಎಸ್ ಯಡಿಯೂರಪ್ಪ ವರಿಷ್ಠರ ಗಮನಕ್ಕೆ ತಂದಿರುವ ಸಾಧ್ಯತೆಯಿದೆ. ಹೀಗಾಗಿ ಲೋಕಸಮರಕ್ಕೆ ಮೈತ್ರಿ ವಿಚಾರದಲ್ಲಿ ಹೈಕಮಾಂಡ್ ಲೆಕ್ಕಾಚಾರ ಏನು? ಕೆಲ ರಾಜ್ಯ ನಾಯಕರ ಅಭಿಪ್ರಾಯಕ್ಕೆ ವರಿಷ್ಠರ ಸಂದೇಶ ಏನು ಎನ್ನುವುದೇ ಸದ್ಯದ ಕುತೂಹಲ.  

ಮತ್ತೊಂದೆಡೆ ಜೆಡಿಎಸ್ ಜೊತೆ ಸ್ನೇಹ ಬೆಳೆಸಿಕೊಂಡು ತನ್ನದೇ ಲೆಕ್ಕಚಾರ ಹಾಕಿ ಈ ಬಾರಿ ಮೈತ್ರಿ ದಾಳ ಉರುಳಿಸಲು ಹೈಕಮಾಂಡ್ ಪ್ಲ್ಯಾನ್ ಮಾಡಿಕೊಂಡಿದೆ. ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ಗೆ ಟಕ್ಕರ್ ಕೊಡಲು ಮೈತ್ರಿ ಅನಿವಾರ್ಯತೆಯಿದೆ. ಕೈಪಡೆಗೆ ಮತ ಪ್ರವಾಹ ತಡೆಯಲು ಮೈತ್ರಿಯಿಂದ ಬ್ರೇಕ್ ಹಾಕಲು ಬಿಜೆಪಿ ತಂತ್ರ ರೂಪಿಸಿದೆ.

ಹೈಕಮಾಂಡ್ ಆತುರದ ನಿಲುವಿಗೆ ಕೆಲವು ರಾಜ್ಯ ನಾಯಕರು ಒಳಗೊಳಗೇ ವಿರೋಧ ವ್ಯಕ್ತಪಡಿಸಿದ್ದು, ಮೊನ್ನೆ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಯಡಿಯೂರಪ್ಪ, ಬೊಮ್ಮಾಯಿ ಎದುರೇ ಮೈತ್ರಿ ಅನಗತ್ಯ ಅಂತ ಕೆಲವರು ಅಭಿಪ್ರಾಯಪಟ್ಟಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments