ಸಿಎಂ ಬದಲಾವಣೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಕಾಂಗ್ರೆಸ್ ಹೈಕಮಾಂಡ್: ಡಿಕೆಶಿ ನಡೆಯೇನು

Krishnaveni K
ಗುರುವಾರ, 11 ಡಿಸೆಂಬರ್ 2025 (13:37 IST)
ಬೆಂಗಳೂರು: ಸಿಎಂ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಡಿಕೆಶಿ ಮುಂದಿನ ನಡೆಯೇನು ಎಂಬುದು ಬಹಿರಂಗವಾಗಿದೆ.

ಸಿಎಂ ಬದಲಾವಣೆ ವಿಚಾರ ಇನ್ನೂ ತಣ್ಣಗಾಗಿಲ್ಲ. ಸದ್ಯಕ್ಕೆ ಅಧಿವೇಶನ ನಡೆಯುತ್ತಿದೆ ಎಂಬ ಕಾರಣಕ್ಕಷ್ಟೇ ರಾಜ್ಯದ ನಾಯಕರು ಸುಮ್ಮನಾಗಿದ್ದಾರೆ. ಆದರೆ ಅಧಿವೇಶನ ಮುಗಿದ ಬಳಿಕ ಈ ವಿಚಾರ ಮತ್ತೆ ಭುಗಿಲೇಳಲಿದೆ. ಈಗಾಗಲೇ ಹೈಕಮಾಂಡ್ ಕೂಡಾ ಅಧಿವೇಶನ ಮುಗಿದ ತಕ್ಷಣ ಈ ವಿಚಾರವನ್ನು ನಿರ್ಧಾರ ಮಾಡುವುದಾಗಿ ತಿಳಿಸಿದೆ.

ಡಿಸೆಂಬರ್ 20-21 ರಂದು ದೆಹಲಿಯಲ್ಲಿ ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಈ ಸಭೆಯಲ್ಲಿ ರಾಜ್ಯದ ನಾಯಕತ್ವ ಬದಲಾವಣೆ ವಿಚಾರ ಅಂತಿಮವಾಗಲಿದೆ.

ಈ ಸಭೆಯಲ್ಲಿ ಡಿಕೆ ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ಇನ್ನು, ಸಿದ್ದರಾಮಯ್ಯ ಕೂಡಾ ಈ ಸಭೆಗೆ ತಯಾರಾಗುತ್ತಿದ್ದು ಇದರ ಪೂರ್ವಭಾವಿಯಾಗಿಯೇ ನಿನ್ನೆ ಬೆಳಗಾವಿಯಲ್ಲಿ ಅಹಿಂದ ನಾಯಕರ ಸಭೆ ನಡೆದಿದೆ ಎನ್ನಲಾಗಿದೆ. ಹೀಗಾಗಿ ಅಧಿವೇಶನ ಮುಗಿದ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುವುದು ಖಚಿತವಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಕೇರಳ ಸಿಎಂ ಆಯ್ಕೆ ಪ್ರಮುಖ ಘಟ್ಟದಲ್ಲಿ, ಖರ್ಗೆಯನ್ನು ಭೇಟಿಯಾದ ರಾಹುಲ್ ಗಾಂಧಿ

ತಿಲಜಾಲ ಬೆಂಕಿ ಘಟನೆ: ಅಕ್ರಮ ಕಟ್ಟಡ ಕೆಡವಲು ಸಿಎಂ ಸುವೆಂದು ಆದೇಶ

ಮುಂದಿನ ಸುದ್ದಿ
Show comments