Webdunia - Bharat's app for daily news and videos

Install App

ಸಿಎಂ ಬದಲಾವಣೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಕಾಂಗ್ರೆಸ್ ಹೈಕಮಾಂಡ್: ಡಿಕೆಶಿ ನಡೆಯೇನು

Krishnaveni K
ಗುರುವಾರ, 11 ಡಿಸೆಂಬರ್ 2025 (13:37 IST)
ಬೆಂಗಳೂರು: ಸಿಎಂ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಡಿಕೆಶಿ ಮುಂದಿನ ನಡೆಯೇನು ಎಂಬುದು ಬಹಿರಂಗವಾಗಿದೆ.

ಸಿಎಂ ಬದಲಾವಣೆ ವಿಚಾರ ಇನ್ನೂ ತಣ್ಣಗಾಗಿಲ್ಲ. ಸದ್ಯಕ್ಕೆ ಅಧಿವೇಶನ ನಡೆಯುತ್ತಿದೆ ಎಂಬ ಕಾರಣಕ್ಕಷ್ಟೇ ರಾಜ್ಯದ ನಾಯಕರು ಸುಮ್ಮನಾಗಿದ್ದಾರೆ. ಆದರೆ ಅಧಿವೇಶನ ಮುಗಿದ ಬಳಿಕ ಈ ವಿಚಾರ ಮತ್ತೆ ಭುಗಿಲೇಳಲಿದೆ. ಈಗಾಗಲೇ ಹೈಕಮಾಂಡ್ ಕೂಡಾ ಅಧಿವೇಶನ ಮುಗಿದ ತಕ್ಷಣ ಈ ವಿಚಾರವನ್ನು ನಿರ್ಧಾರ ಮಾಡುವುದಾಗಿ ತಿಳಿಸಿದೆ.

ಡಿಸೆಂಬರ್ 20-21 ರಂದು ದೆಹಲಿಯಲ್ಲಿ ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಈ ಸಭೆಯಲ್ಲಿ ರಾಜ್ಯದ ನಾಯಕತ್ವ ಬದಲಾವಣೆ ವಿಚಾರ ಅಂತಿಮವಾಗಲಿದೆ.

ಈ ಸಭೆಯಲ್ಲಿ ಡಿಕೆ ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ಇನ್ನು, ಸಿದ್ದರಾಮಯ್ಯ ಕೂಡಾ ಈ ಸಭೆಗೆ ತಯಾರಾಗುತ್ತಿದ್ದು ಇದರ ಪೂರ್ವಭಾವಿಯಾಗಿಯೇ ನಿನ್ನೆ ಬೆಳಗಾವಿಯಲ್ಲಿ ಅಹಿಂದ ನಾಯಕರ ಸಭೆ ನಡೆದಿದೆ ಎನ್ನಲಾಗಿದೆ. ಹೀಗಾಗಿ ಅಧಿವೇಶನ ಮುಗಿದ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುವುದು ಖಚಿತವಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments