ಸಿದ್ದರಾಮಯ್ಯನವರ ಈ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ

Krishnaveni K
ಶನಿವಾರ, 6 ಡಿಸೆಂಬರ್ 2025 (08:48 IST)
ಬೆಂಗಳೂರು: ರಾಜ್ಯದಲ್ಲಿ ಕುಸ್ತಿ ಕದನ ಒಂದು ಹಂತಕ್ಕೆ ಬಂದು ನಿಂತಿದೆ. ಇದೀಗ ಕದನ ವಿರಾಮ ಎನ್ನಬಹುದು. ಹಾಗಿದ್ದರೂ ಸಿದ್ದರಾಮಯ್ಯನವರ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ. ಹೀಗಾಗಿಯೇ ಹೈಕಮಾಂಡ್ ಕೂಡಾ ತರಾತುರಿಯ ನಿರ್ಧಾರ ಕೈಗೊಂಡಿಲ್ಲ.

ಸಿದ್ದರಾಮಯ್ಯ ಅಹಿಂದ ಪ್ರಬಲ ನಾಯಕ. ಜೆಡಿಎಸ್ ನಿಂದ ವಲಸೆ ಬಂದವರು, ಮೂಲ ಕಾಂಗ್ರೆಸ್ಸಿಗರಲ್ಲ ಎಂದು ಅನೇಕರು ಅವರ ಬಗ್ಗೆ ವಾದಿಸಬಹುದು. ಆದರೆ ಕಾಂಗ್ರೆಸ್ ನಲ್ಲಿ ಅವರೀಗ ಒಂದು ದೊಡ್ಡ ಶಕ್ತಿ. ಅವರನ್ನು ಎದುರು ಹಾಕಿಕೊಂಡರೆ ಕಾಂಗ್ರೆಸ್ ಗೆ ಅಪಾಯ ತಪ್ಪಿದ್ದಲ್ಲ.

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನವರನ್ನು ಬೆಂಬಲಿಸುವ ದೊಡ್ಡಬಣವೇ ಇದೆ. ಅವರೊಬ್ಬ ರಾಜಕೀಯ ಚಾಣಕ್ಯ. ಯಾವ ಸಂದರ್ಭದಲ್ಲಿ ಹೇಗೆ ತಿರುಗೇಟು ನೀಡಬೇಕು ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ. ಅವರನ್ನು ರಾಜಕೀಯವಾಗಿ ಬಲ್ಲವರು ಯಾರೂ ಅವರನ್ನು ಅಷ್ಟು ಬೇಗ ಎದುರು ಹಾಕಿಕೊಳ್ಳಲು ಹೋಗಲ್ಲ. ಒಂದು ವೇಳೆ ಅವರನ್ನು ಎದುರು ಹಾಕಿಕೊಂಡು ಡಿಕೆ ಶಿವಕುಮಾರ್ ಗೆ ಪಟ್ಟ ಕಟ್ಟಿದರೆ ಸಿದ್ದರಾಮಯ್ಯ ತಿರುಗಿಬೀಳುವ ಸಾಧ್ಯತೆಯಿದೆ. ಹೀಗಾದಲ್ಲಿ ಅವರ ಬೆಂಬಲಿಗರೂ ಅವರ ಬೆನ್ನಿಗೆ ನಿಲ್ಲುತ್ತಾರೆ. ಆಗ ಸರ್ಕಾರಕ್ಕೇ ಅಪಾಯ. ಈ ಗುಟ್ಟು ಗೊತ್ತಿರುವ ಕಾರಣಕ್ಕೇ ಹೈಕಮಾಂಡ್ ಕೂಡಾ ಸಿದ್ದರಾಮಯ್ಯ ವಿಚಾರದಲ್ಲಿ ಎಚ್ಚರಿಕೆ ನಡೆ ಇಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋಲಿನ ಭಯದಿಂದ ಜಿಬಿಎ ಚುನಾವಣೆ ಮುಂದೂಡುವ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

ಡಿಕೆ ಶಿವಕುಮಾರ್ ಅವರೇ ಕಂಬಿ ಇಲ್ಲದ ರೈಲು ಬಿಡೋದು ನಿಲ್ಲಿಸಿ: ಆರ್ ಅಶೋಕ್

ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಇರುವಾಗ ಮೋದಿ ಇಟೆಲಿಯಲ್ಲಿ ಮಿಠಾಯಿ ಹಂಚುತ್ತಿದ್ದಾರೆ: ರಾಹುಲ್ ಗಾಂಧಿ

ಅಬ್ಬಾ ಏನು ಖುಷಿ..ಫಸಲು ಕೈಗೆ ಬಂದ ಖುಷಿಯಲ್ಲಿ ಪಲ್ಟಿ ಹೊಡೆದು ಸಂಭ್ರಮಿಸಿದ ವೃದ್ಧ ರೈತ Video

ಮೆಲೊನಿಗೆ ಮೆಲೊಡಿ ಚಾಕಲೇಟ್ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ Video

ಮುಂದಿನ ಸುದ್ದಿ
Show comments