Webdunia - Bharat's app for daily news and videos

Install App

ರಾಜ್ಯ ಬಿಜೆಪಿ ನಾಯಕರಿಗೆ ಶಾಕ್ ಮೂಡಿಸಿದ ಹೈಕಮಾಂಡ್ ತಂತ್ರ!

Webdunia
ಭಾನುವಾರ, 3 ಡಿಸೆಂಬರ್ 2017 (13:35 IST)
ರಾಜ್ಯ ರಾಜಕಾರಣದಲ್ಲಿ ತಾವೇ ಸರ್ವಸ್ವ, ಸರ್ವೋಚ್ಚ ನಾಯಕ ಎಂದು ಬೀಗುತ್ತಿದ್ದ ಬಿಜೆಪಿ ನಾಯಕರಿಗೆ ಪಕ್ಷದ ಹೈಕಮಾಂಡ್ ಶಾಕ್ ನೀಡಿದೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರಿಗೆ ಪಕ್ಷದ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಅಥವಾ ಶಿಫಾರಸ್ಸು ಮಾಡುವ ಅಧಿಕಾರದಿಂದ ವಂಚಿತಗೊಳಿಸಿದೆ
 
ರಾಜ್ಯದ 224 ಕ್ಷೇತ್ರಗಳಿಗೆ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ತಾನೇ ಆಯ್ಕೆ ಮಾಡಲು ಹೈಕಮಾಂಡ್ ನಿರ್ಧರಿಸಿದೆ. ಹೈಕಮಾಂಡ್‌ನ ಅಂತರಿಕ ಸರ್ವೆಯಿಂದ ಗೆಲ್ಲುವ ನಾಯಕರಿಗೆ ಮಾತ್ರ ಟಿಕೆಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಗುಜರಾತ್ ರಾಜ್ಯದಲ್ಲಿ ಮಾಡಿದ ಮಾಸ್ಚರ್ ಪ್ಲ್ಯಾನ್ ಯಶಸ್ವಿಯಾದಲ್ಲಿ ಅದೇ ರಣತಂತ್ರವನ್ನು ರಾಜ್ಯದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಅಳವಡಿಸಲು ರಣತಂತ್ರ ರೂಪಿಸಿದೆ ಎನ್ನಲಾಗುತ್ತದೆ. 
 
ಹೈಕಮಾಂಡ್‌ ನಡೆಯಿಂದಾಗಿ ಹಾಲಿ ಶಾಸಕರು ಮಾಜಿ ಶಾಸಕರ ಟಿಕೆಟ್ ಕೈ ತಪ್ಪುವ ಸಾಧ್ಯತೆಗಳಿವೆ. ಪ್ರತಿಯೊಂದು ಕ್ಷೇತ್ರದ ಅಭ್ಯರ್ಥಿಯನ್ನು ತಾನೇ ಹುಡುಕುವುದಾಗಿ ಹೈಕಮಾಂಡ್ ರಾಜ್ಯ ಘಟಕಕ್ಕೆ ಸೂಚನೆ ರವಾನಿಸಿದೆ. 
 
ಚುನಾವಣೆಗೆ ಕೇವಲ ಕೆಲವೇ ತಿಂಗಳುಗಳಿರುವಾಗ ರಾಜ್ಯ ಬಿಜೆಪಿಯಲ್ಲಿ ನಾವೇ ಸುಪ್ರೀಂ ಅಂತಾ ಓಡಾಡುತ್ತಿದ್ದವರಿಗೆ ಹೈಕಮಾಂಡ್ ಶಾಕ್ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಪ್ರಿಯಕರನ ಜತೆ ಸೇರಿ ಪತಿಗೆ ನಿದ್ರೆ ಮಾತ್ರೆ ಕೊಟ್ಟು, ಗಂಡನ ಖಾಸಗಿ ಅಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಮರ್ಡರ್ ಮಾಡಿದ ಪತ್ನಿ

ಓಣಂ ಹಬ್ಬದ ಹಿನ್ನೆಲೆ ಕಣ್ಣೂರಿಗೆ ಪ್ರಯಾಣಿಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಕದಿಯಲು ಬಂದವನು ಬೆಡ್ ರೂಂನಲ್ಲಿ ಇದೊಂದು ತಪ್ಪು ಮಾಡಿ ಸಿಕ್ಕಿಹಾಕಿಕೊಂಡ Video

ಮುಂದಿನ ಸುದ್ದಿ
Show comments