Webdunia - Bharat's app for daily news and videos

Install App

ಬಿಎಸ್‌ವೈ-ಈಶ್ವರಪ್ಪರ ಕಲಹವನ್ನು ಹೈಕಮಾಂಡ್ ಗಮನಕ್ಕೆ ತರಲಾಗಿದೆ: ಸದಾನಂದಗೌಡ

Webdunia
ಶುಕ್ರವಾರ, 20 ಜನವರಿ 2017 (15:56 IST)
ಬಿ.ಎಸ್.ಯಡಿಯೂರಪ್ಪ ಹಾಗೂ ಕೆ.ಎಸ್.ಈಶ್ವರಪ್ಪ ನಡುವಿನ ವೈಮನಸ್ಸನ್ನು ಕೇಂದ್ರ ನಾಯಕರು ಗಮನಕ್ಕೆ ತರಲಾಗಿದ್ದು, ಅವರು ಆದಷ್ಟು ಬೇಗ ಸಮಸ್ಯೆ ಪರಿಹರಿಸಲಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದಗೌಡ ತಿಳಿಸಿದ್ದಾರೆ.
 
ಬೆಂಗಳೂರು ಉತ್ತರ ವಲಯದ ಸರಕಾರಿ ಪ್ರಥಮಿಕ ಶಾಲೆಯ ನೂತನ ಕಟ್ಟದ ಉದ್ಘಾಟಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ನಿರೀಕ್ಷೆಗೂ ಮೀರಿ ಕೆಲವು ಬೆಳವಣಿಗೆ ನಡೆಯುತ್ತಿವೆ. ನಾವ್ಯಾರು ಕಣ್ಮುಚ್ಚಿ ಕೂರುವುದಕ್ಕೆ ಸಾಧ್ಯವಿಲ್ಲ. ಈ ಕುರಿತು ನಾಳೆ ನಡೆಯುವ ರಾಜ್ಯ ಕಾರ್ಯಕಾರಣಿಗಳ ಸಭೆಯಲ್ಲಿ ಚರ್ಚಿಸುತ್ತೇವೆ ಎಂದರು. 
 
ಬಿ.ಎಸ್.ಯಡಿಯೂರಪ್ಪ ಹಾಗೂ ಕೆ.ಎಸ್.ಈಶ್ವರಪ್ಪ ಪಕ್ಷದ ಹಿರಿಯ ನಾಯಕರು. ಪಕ್ಷದ ಹಿರಿಯ ನಾಯಕರಾದ ಅವರು, ತಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ವೈಯಕ್ತಿಕ ವಿಷಯಗಳನ್ನು ಬದಿಗಿಟ್ಟು ಪಕ್ಷದ ಕೆಲಸದಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು. 
 
ರಾಜ್ಯ ಬಿಜೆಪಿ ಘಟಕದ ವಿದ್ಯಮಾನಗಳ ಕುರಿತು ಕೇಂದ್ರ ನಾಯಕರ ಗಮನಕ್ಕೆ ತಂದಿದ್ದೇನೆ. ಉಭಯ ನಾಯಕರ ನಡುವಿನ ವೈಮನಸ್ಸಿನ ಕುರಿತು ಕೇಂದ್ರ ನಾಯಕರು ಹೆಚ್ಚು ಒತ್ತು ಕೊಡುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು.
 
ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವಿಚಾರ......
 
ವಿ.ಸೋಮಣ್ಣ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಾರೆ ಎನ್ನುವ ವಿಚಾರ ಮಾಧ್ಯಮಗಳಿಂದ ಗೊತ್ತಾಯ್ತು. ಈ ಕುರಿತು ಇಂದು ಸೋಮಣ್ಣ ಅವರ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಸದಾನಂದಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments