Webdunia - Bharat's app for daily news and videos

Install App

ಬಿಬಿಎಂಪಿ ವಿರುದ್ಧ ಹೈಕೋರ್ಟ್ ಗರಂ..!!!

Webdunia
ಶನಿವಾರ, 1 ಅಕ್ಟೋಬರ್ 2022 (14:17 IST)

ಬಿಬಿಎಂಪಿ ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ಕೋರಮಂಗಲದ ವಿಜಯನ್ ಮೆನನ್ ಸೇರಿ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು ನ್ಯಾಯಪೀಠಕ್ಕೆ ವಸ್ತುಸ್ಥಿತಿ ವರದಿ ಸಲ್ಲಿಸಿ, '2022ರ ಸೆಪ್ಟೆಂಬರ್ 19ರಿಂದ ಈವರೆಗೆ 10 ಒತ್ತುವರಿ ತೆರವುಗೊಳಿಸಲಾಗಿದೆ. ಇನ್ನೂ 592 ಅತಿಕ್ರಮಣ ತೆರವುಗೊಳಿಸಬೇಕಾಗಿದೆ' ಎಂದರು. ಇದೇ ವರದಿಯಲ್ಲಿ, 'ನಗರದ ಪ್ರಮುಖ ರಸ್ತೆಗಳಲ್ಲಿನ 221 ಗುಂಡಿಗಳನ್ನು ಹಾಟ್ ಮಿಕ್ಸ್ ಬಳಸಿ ತುಂಬಲಾಗಿದೆ. ಮಹದೇವಪುರ ವಲಯದ (324 ಕಿ.ಮೀ.) ರಸ್ತೆಗಳನ್ನು ಮರು ಡಾಂಬರೀಕರಣ ಮಾಡಲಾಗುತ್ತಿದ್ದು, 427 ಕಿ.ಮೀ. ಉದ್ದದ ರಸ್ತೆಗಳ ಮರು ಡಾಂಬರೀಕರಣ ಪ್ರಾರಂಭಿಸಲಾಗಿದೆ' ಎಂದು ವಿವರಿಸಿದರು.

ದಾಖಲೆ ಪರಿಶೀಲಿಸಿದ ನ್ಯಾಯಪೀಠ, 'ವರದಿ ತೃಪ್ತಿಕರವಾಗಿ ಕಾಣುತ್ತಿಲ್ಲ. ಈ ವಿಷಯದಲ್ಲಿ ಬಿಬಿಎಂಪಿ ತನ್ನ ಪ್ರಗತಿಯನ್ನು ತೋರಿಸದೇ ಹೋದಲ್ಲಿ ಎಂಜಿನಿಯರ್‌ಗಳ ವೇತನ ತಡೆ ಹಿಡಿಯಲು ಆದೇಶಿಸಬೇಕಾಗುತ್ತದೆ' ಎಂದು ಮೌಖಿಕ ಎಚ್ಚರಿಕೆ ನೀಡಿತು. ಅಂತೆಯೇ, 'ರಸ್ತೆ ಗುಂಡಿಗಳನ್ನು ತುಂಬುವ ಕಾಮಗಾರಿಯೂ ಸಮರ್ಪಕವಾಗಿಲ್ಲ. ಈ ರಸ್ತೆಗಳು ವಾಹನ ಸವಾರರಿಗೆ ಬಲು ಕಷ್ಟಕರವಾಗಿ ಪರಿಣಮಿಸಿವೆ' ಎಂದು ಅಸಮಾಧಾನ ವ್ಯಕ್ತಪಡಿಸಿತು. ವಿಚಾರಣೆಯನ್ನು ಅಕ್ಟೋಬರ್ 27ಕ್ಕೆ ಮುಂದೂಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments