ಬಿಬಿಎಂಪಿ ವಿರುದ್ಧ ಹೈಕೋರ್ಟ್ ಗರಂ..!!!

Webdunia
ಶನಿವಾರ, 1 ಅಕ್ಟೋಬರ್ 2022 (14:17 IST)

ಬಿಬಿಎಂಪಿ ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ಕೋರಮಂಗಲದ ವಿಜಯನ್ ಮೆನನ್ ಸೇರಿ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು ನ್ಯಾಯಪೀಠಕ್ಕೆ ವಸ್ತುಸ್ಥಿತಿ ವರದಿ ಸಲ್ಲಿಸಿ, '2022ರ ಸೆಪ್ಟೆಂಬರ್ 19ರಿಂದ ಈವರೆಗೆ 10 ಒತ್ತುವರಿ ತೆರವುಗೊಳಿಸಲಾಗಿದೆ. ಇನ್ನೂ 592 ಅತಿಕ್ರಮಣ ತೆರವುಗೊಳಿಸಬೇಕಾಗಿದೆ' ಎಂದರು. ಇದೇ ವರದಿಯಲ್ಲಿ, 'ನಗರದ ಪ್ರಮುಖ ರಸ್ತೆಗಳಲ್ಲಿನ 221 ಗುಂಡಿಗಳನ್ನು ಹಾಟ್ ಮಿಕ್ಸ್ ಬಳಸಿ ತುಂಬಲಾಗಿದೆ. ಮಹದೇವಪುರ ವಲಯದ (324 ಕಿ.ಮೀ.) ರಸ್ತೆಗಳನ್ನು ಮರು ಡಾಂಬರೀಕರಣ ಮಾಡಲಾಗುತ್ತಿದ್ದು, 427 ಕಿ.ಮೀ. ಉದ್ದದ ರಸ್ತೆಗಳ ಮರು ಡಾಂಬರೀಕರಣ ಪ್ರಾರಂಭಿಸಲಾಗಿದೆ' ಎಂದು ವಿವರಿಸಿದರು.

ದಾಖಲೆ ಪರಿಶೀಲಿಸಿದ ನ್ಯಾಯಪೀಠ, 'ವರದಿ ತೃಪ್ತಿಕರವಾಗಿ ಕಾಣುತ್ತಿಲ್ಲ. ಈ ವಿಷಯದಲ್ಲಿ ಬಿಬಿಎಂಪಿ ತನ್ನ ಪ್ರಗತಿಯನ್ನು ತೋರಿಸದೇ ಹೋದಲ್ಲಿ ಎಂಜಿನಿಯರ್‌ಗಳ ವೇತನ ತಡೆ ಹಿಡಿಯಲು ಆದೇಶಿಸಬೇಕಾಗುತ್ತದೆ' ಎಂದು ಮೌಖಿಕ ಎಚ್ಚರಿಕೆ ನೀಡಿತು. ಅಂತೆಯೇ, 'ರಸ್ತೆ ಗುಂಡಿಗಳನ್ನು ತುಂಬುವ ಕಾಮಗಾರಿಯೂ ಸಮರ್ಪಕವಾಗಿಲ್ಲ. ಈ ರಸ್ತೆಗಳು ವಾಹನ ಸವಾರರಿಗೆ ಬಲು ಕಷ್ಟಕರವಾಗಿ ಪರಿಣಮಿಸಿವೆ' ಎಂದು ಅಸಮಾಧಾನ ವ್ಯಕ್ತಪಡಿಸಿತು. ವಿಚಾರಣೆಯನ್ನು ಅಕ್ಟೋಬರ್ 27ಕ್ಕೆ ಮುಂದೂಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments