Webdunia - Bharat's app for daily news and videos

Install App

ಅಕ್ರಮ ಗಣಿಗಾರಿಕೆ ಕಡಿವಾಣಕ್ಕೆ ಹೈಕೋರ್ಟ್ ನಿರ್ದೇಶನ

Webdunia
ಶುಕ್ರವಾರ, 3 ಸೆಪ್ಟಂಬರ್ 2021 (09:36 IST)
ಬೆಂಗಳೂರು : 'ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಪಕ್ಕದಲ್ಲಿರುವ ಸಾದರಹಳ್ಳಿ ಬಂಡೆ ಮತ್ತು ಸುತ್ತಮುತ್ತ ಯಾವುದೇ ಅಕ್ರಮ ಗಣಿಗಾರಿಕೆಗೆ ನಡೆಯದಂತೆ ನೋಡಿಕೊಳ್ಳಬೇಕು' ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ನಿವೃತ್ತ ಐಪಿಎಸ್ ಅಧಿಕಾರಿ ಎಸ್. ಮರಿಸ್ವಾಮಿ ಹಾಗೂ ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
'ಈ ಗಣಿಗಾರಿಕೆ ಕ್ವಾರಿಗಳ ಸುತ್ತ ಈಗ ವಸತಿ ಬಡಾವಣೆಗಳು ನಿರ್ಮಾಣವಾಗಿವೆ. ಜೇಡ್ ಗಾರ್ಡನ್ ಲೇಔಟ್, ಹಾಲಿವುಡ್ ಟೌನ್ ರೆಸಿಡೆನ್ಷಿಯಲ್ ಲೇಔಟ್, ಸ್ವಿಸ್ ಟೌನ್ ಲೇಔಟ್ ಸುತ್ತಮುತ್ತಲ ಪ್ರದೇಶಗಳಿಂದ ಕೇವಲ 100ರಿಂದ 200 ಮೀಟರ್ ದೂರದಲ್ಲೇ ಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿವೆ' ಎಂದು ಅರ್ಜಿದಾರರು ತಿಳಿಸಿದ್ದಾರೆ.
'ಗಣಿಗಾರಿಕೆಯು ನಿವಾಸಿಗಳ ಮೇಲೆ, ಅದರಲ್ಲೂ ಹಿರಿಯ ನಾಗರಿಕರ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಕ್ವಾರಿಯ ದೂಳು ಹಲವರ ಸಾವಿಗೂ ಕಾರಣವಾಗಿವೆ. 'ಸಿಲಿಕೋಸಿಸ್' ರೀತಿಯ ರೋಗಗಳಿಗೂ ಜನ ತುತ್ತಾಗುತ್ತಿದ್ದಾರೆ. ಶ್ವಾಸಕೋಶದಲ್ಲಿ ಕೊರೊನಾ ವೈರಾಣು ಮಾಡುವುದಕ್ಕಿಂತ ಹೆಚ್ಚು ಹಾನಿಯನ್ನು ಈ ದೂಳು ಮಾಡುತ್ತಿದೆ' ಎಂದು ಅರ್ಜಿದಾರರು ವಿವರಿಸಿದ್ದಾರೆ.
'ಅಕ್ರಮ ಗಣಿಗಾರಿಕೆ ಸಂಬಂಧ ಲೋಕಾಯುಕ್ತಕ್ಕೂ ಈ ಹಿಂದೆ ದೂರು ನೀಡಲಾಗಿತ್ತು. ಲೋಕಾಯುಕ್ತ ತನಿಖೆ ಬಳಿಕ 2018ರಲ್ಲಿ ಅಕ್ರಮ ಗಣಿಗಾರಿಕೆ ಸ್ಥಗಿತಗೊಂಡಿತ್ತು. ಇದೇ ಜಾಗದಲ್ಲಿ ಮತ್ತೆ ಗಣಿಗಾರಿಕೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅನುಮತಿ ನೀಡಿರುವ ಅನುಮಾನ ಇದೆ' ಎಂದು ಅರ್ಜಿದಾರರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

ಮುಂದಿನ ಸುದ್ದಿ
Show comments