ಕರ್ನಾಟಕ ವಿಶ್ವವಿದ್ಯಾಲಯದ ಅವ್ಯವಹಾರ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತರಾಗಿರುವ ಕುಲಪತಿ ವಾಲೀಕಾರ್ ಅವರ ವಿರುದ್ಧ ನಡೆಸುತ್ತಿರುವ ತನಿಖೆಯನ್ನು ರದ್ದುಗೊಳಿಸುವಂತೆ ಹೈಕೋರ್ಟ್ನ ಧಾರವಾಡ ಪೀಠ ಗುರುವಾರ ಆದೇಶಿಸಿದೆ.
ನ್ಯಾಯಮೂರ್ತಿ ಬಿಳ್ಳಪ್ಪ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದ್ದು, ವಿವಿ ಕುಲಪತಿಗಳು ನೌಕರರಲ್ಲ. ಅಲ್ಲದೆ ಪ್ರಕರಣದಲ್ಲಿ ರಾಜ್ಯಪಾಲರು ವ್ಯಾಪ್ತಿಗೂ ಮೀರಿ ವರ್ತಿಸಿದ್ದಾರೆ ಎಂದು ಪೀಠ ಅಭಿಪ್ರಾಯಪಟ್ಟಿದೆ.
ಪ್ರಕರಣದ ಬಗ್ಗೆ ಸ್ವಯಂ ನಿರ್ಣಯ ಕೈಗೊಂಡಿರುವ ನ್ಯಾಯಾಲಯ, ಕಾಯಿದೆ 2000ದ ಕಲಂ 8/1ರ ಅಡಿಯಲ್ಲಿ ವಿಚಾರಣೆ ಕೈಗೆತ್ತಿಕೊಂಡಿತ್ತು.
ರಾಜ್ಯಪಾಲರ ಆದೇಶದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು.