Webdunia - Bharat's app for daily news and videos

Install App

ಗೋರಿಪಾಳ್ಯ ಪಾಕಿಸ್ತಾನದಂತಿದೆ ಎಂದ ಹೈಕೋರ್ಟ್‌ ನ್ಯಾಯಮೂರ್ತಿ ವಿಷಾದ

Sampriya
ಶನಿವಾರ, 21 ಸೆಪ್ಟಂಬರ್ 2024 (18:39 IST)
Photo Courtesy X
ಬೆಂಗಳೂರು: ಪ್ರಕರಣಗಳ ವಿಚಾರಣೆ ವೇಳೆ ಬೆಂಗಳೂರಿನ ಗೋರಿಪಾಳ್ಯ ಪಾಕಿಸ್ತಾನದಂತಿದೆ ಎಂದು ಬಣ್ಣಿಸಿದ್ದ ಹೈಕೋರ್ಟ್‌ನ ನ್ಯಾಯಮೂರ್ತಿ ವಿ.ಶ್ರೀಶಾನಂದ ವಿಷಾದ ವ್ಯಕ್ತಪಡಿಸಿದ್ದಾರೆ.

ನನ್ನ ಆಕ್ಷೇಪಾರ್ಹ ಹೇಳಿಕೆಗಳು ಯಾರಿಗಾದರೂ ನೋವುಂಟು ಮಾಡಿದ್ದರೆ ಅದಕ್ಕಾಗಿ ಪ್ರಾಮಾಣಿಕ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳು ಮತ್ತು ವಕೀಲರ ಎದುರು ಮುಕ್ತ ನ್ಯಾಯಾಲಯದಲ್ಲಿ ಈ ಕುರಿತು ವಿವರಿಸಿ ವಿಷಾಧ ವ್ಯಕ್ತಪಡಿಸಿದರು.

ಈ ವೇಳೆ ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್‌, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್‌ ಸುಬ್ಬಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಟಿ.ಜಿ.ರವಿ, ಖಜಾಂಚಿ ಎಂ.ಟಿ.ಹರೀಶ್‌ ಮತ್ತು ಹೈಕೋರ್ಟ್‌ ಕಾರ್ಯಕಾರಿ ಸಮಿತಿ ಸದಸ್ಯರು, ಹಿರಿಯ ವಕೀಲ ಅಶೋಕ ಹಾರನಹಳ್ಳಿ ಹಾಗೂ ವಕೀಲರು ಕೋರ್ಟ್‌ ಹಾಲ್‌ನಲ್ಲಿ ಹಾಜರಿದ್ದರು.

ಪ್ರಕರಣದ ಹಿನ್ನೆಲೆ ಹೀಗಿದೆ: ನ್ಯಾಯಮೂರ್ತಿ ಶ್ರೀಶಾನಂದ ಅವರು ಪ್ರಕರಣಗಳ ವಿಚಾರಣೆ ವೇಳೇ, ಬೆಂಗಳೂರಿನ ಗೋರಿಪಾಳ್ಯ ಪಾಕಿಸ್ತಾನದಂತಿದೆ ಎಂದು ಬಣ್ಣಿಸಿದ್ದು ಹಾಗೂ ಮಹಿಳಾ ವಕೀಲೆಯೊಬ್ಬರಿಗೆ, ನಿಮ್ಮ ಪ್ರತಿವಾದಿ ಯಾವ ಬಣ್ಣದ ಒಳ ಉಡುಪು ಧರಿಸಿದ್ದಾರೆ ಎಂಬುದನ್ನೂ ನೀವು ಹೇಳಬಲ್ಲಷ್ಟು ಅವರನ್ನು ಅರಿತಿದ್ದೀರಿ ಎಂದು ವ್ಯಂಗ್ಯ ಮಾತನ್ನಾಡಿದ್ದರು.

ಇವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದ ಹಾಗೇ ಇದೀಗ ನ್ಯಾಯಮೂರ್ತಿಗಳು ವಿಷಾಧ ವ್ಯಕ್ತಪಡಿಸಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments