Webdunia - Bharat's app for daily news and videos

Install App

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಮೌಲ್ಯಮಾಪನಕ್ಕೆ ಹೈಕೋರ್ಟ್ ಸೂಚನೆ

Webdunia
ಬುಧವಾರ, 1 ಡಿಸೆಂಬರ್ 2021 (20:22 IST)
ಬೆಂಗಳೂರು: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಮೌಲ್ಯಮಾಪನಕ್ಕೆ ಆದೇಶ ಹೊರಡಿಸಲಾಗಿದೆ. ಯೋಜನೆಯ ಸಾಧಕ ಬಾಧಕದ ಬಗ್ಗೆ ಮೌಲ್ಯಮಾಪನಕ್ಕೆ ಸೂಚನೆ ನೀಡಲಾಗಿದೆ. ಹೈಕೋರ್ಟ್ ವಿಭಾಗೀಯ ಪೀಠದಿಂದ ನಿರ್ದೇಶನ ಸಿಕ್ಕಿದ್ದು 40 ವರ್ಷಗಳಿಂದ ಬಾಕಿಯಿರುವ ರೈಲು ಯೋಜನೆ ಪ್ರಶ್ನಿಸಿ ಕೆಲ ಪರಿಸರ ಸಂರಕ್ಷಣಾ ಸಂಘಗಳು ಪಿಐಎಲ್ ಸಲ್ಲಿಸಿದ್ದವು. ಹೈಕೋರ್ಟ್ ರಾಜ್ಯ ವನ್ಯಜೀವಿ ಮಂಡಳಿ ಆದೇಶಕ್ಕೆ ತಡೆ ನೀಡಿತ್ತು. ಇದೀಗ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಹೈಕೋರ್ಟ್ ನಿರ್ದೇಶನ ನೀಡಿದ್ದು ರೈಲು ಮಾರ್ಗದ ಮೌಲ್ಯಮಾಪನ ನಡೆಸಿ ವರದಿಗೆ ಸೂಚಿಸಿದೆ.
 
ಉತ್ತರ ಕರ್ನಾಟಕ ಹಾಗೂ ಕರಾವಳಿಗೆ ಸಂಪರ್ಕ ಕಲ್ಪಿಸುವ ಮಹತ್ವದ ಯೋಜನೆಯಾಗಿರುವ ಈ ರೈಲು ಮಾರ್ಗ ಪ್ರಸ್ತಾವನೆಯನ್ನು 1998ರಲ್ಲೇ ಸಲ್ಲಿಸಲಾಗಿತ್ತು. ಅಂದಿನಿಂದಲೂ ಯೋಜನೆಗೆ ಪರಿಸರವಾದಿಗಳು ಹಾಗೂ ವನ್ಯಜೀವಿ ಸಂರಕ್ಷಕರ ವಿರೋಧವಿದೆ. ಒಂದೊಮ್ಮೆ ಯೋಜನೆ ಜಾರಿಯಾದರೆ ಉತ್ತರ ಕನ್ನಡದ ಪಶ್ಚಿಮ ಘಟ್ಟದ ಭಾಗದಲ್ಲಿ 2.2 ಲಕ್ಷ ಮರಗಳ ಮಾರಣಹೋಮವಾಗುತ್ತದೆ.
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಯ ಸಾಧಕ ಬಾಧಕ ಬಗ್ಗೆ ಮೌಲ್ಯಮಾಪನಕ್ಕೆ ಹೈಕೋರ್ಟ್ ಸೂಚನೆ
ಹೈಕೋರ್ಟ್
ಬೆಂಗಳೂರು: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಮೌಲ್ಯಮಾಪನಕ್ಕೆ ಆದೇಶ ಹೊರಡಿಸಲಾಗಿದೆ. ಯೋಜನೆಯ ಸಾಧಕ ಬಾಧಕದ ಬಗ್ಗೆ ಮೌಲ್ಯಮಾಪನಕ್ಕೆ ಸೂಚನೆ ನೀಡಲಾಗಿದೆ. ಹೈಕೋರ್ಟ್ ವಿಭಾಗೀಯ ಪೀಠದಿಂದ ನಿರ್ದೇಶನ ಸಿಕ್ಕಿದ್ದು 40 ವರ್ಷಗಳಿಂದ ಬಾಕಿಯಿರುವ ರೈಲು ಯೋಜನೆ ಪ್ರಶ್ನಿಸಿ ಕೆಲ ಪರಿಸರ ಸಂರಕ್ಷಣಾ ಸಂಘಗಳು ಪಿಐಎಲ್ ಸಲ್ಲಿಸಿದ್ದವು. ಹೈಕೋರ್ಟ್ ರಾಜ್ಯ ವನ್ಯಜೀವಿ ಮಂಡಳಿ ಆದೇಶಕ್ಕೆ ತಡೆ ನೀಡಿತ್ತು. ಇದೀಗ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಹೈಕೋರ್ಟ್ ನಿರ್ದೇಶನ ನೀಡಿದ್ದು ರೈಲು ಮಾರ್ಗದ ಮೌಲ್ಯಮಾಪನ ನಡೆಸಿ ವರದಿಗೆ ಸೂಚಿಸಿದೆ.
 
ಉತ್ತರ ಕರ್ನಾಟಕ ಹಾಗೂ ಕರಾವಳಿಗೆ ಸಂಪರ್ಕ ಕಲ್ಪಿಸುವ ಮಹತ್ವದ ಯೋಜನೆಯಾಗಿರುವ ಈ ರೈಲು ಮಾರ್ಗ ಪ್ರಸ್ತಾವನೆಯನ್ನು 1998ರಲ್ಲೇ ಸಲ್ಲಿಸಲಾಗಿತ್ತು. ಅಂದಿನಿಂದಲೂ ಯೋಜನೆಗೆ ಪರಿಸರವಾದಿಗಳು ಹಾಗೂ ವನ್ಯಜೀವಿ ಸಂರಕ್ಷಕರ ವಿರೋಧವಿದೆ. ಒಂದೊಮ್ಮೆ ಯೋಜನೆ ಜಾರಿಯಾದರೆ ಉತ್ತರ ಕನ್ನಡದ ಪಶ್ಚಿಮ ಘಟ್ಟದ ಭಾಗದಲ್ಲಿ 2.2 ಲಕ್ಷ ಮರಗಳ ಮಾರಣಹೋಮವಾಗುತ್ತದೆ.
 
 
ರೈಲು ಮಾರ್ಗ ಹಾದು ಹೋಗುವ ಕಾಡಿನ ಪ್ರದೇಶ ಪರಿಸರದ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟದಲ್ಲಿದೆ. ಒಂದು ವೇಳೆ ಯೋಜನೆಗೆ ಅನುಮೋದನೆ ದೊರೆತರೆ ಅಳಿವಿನಂಚಿನಲ್ಲಿರುವ ಅಪರೂಪದ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಸಂಚಕಾರ ಬರಲಿದೆ. ಅಲ್ಲದೇ ಕಾಳಿ ಕಣಿವೆಯಲ್ಲಿರುವ ನದಿಗಳ ಸಹಜ ಹರಿವಿನ ಮೇಲೂ ಪರಿಣಾಮ ಬೀರಲಿದೆ. ಇದು ಸ್ವಾಭಾವಿಕ ಪರಿಸರ ವ್ಯವಸ್ಥೆಗೆ ಧಕ್ಕೆಯಾಗಲಿದ್ದು, ಹವಾಮಾನ ಬದಲಾವಣೆಗೂ ಕಾರಣವಾಗಲಿದೆ ಎಂಬುದು ಪರಿಸರವಾದಿಗಳು ಮತ್ತು ವನ್ಯಜೀವಿ ಪ್ರಿಯರ ವಾದವಾಗಿದೆ. ಹೀಗಾಗಿ ಈ ಯೋಜನೆ ಬಗ್ಗೆ ವಿರೋಧವಿತ್ತು. ಸದ್ಯ ಇದೀಗ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಹೈಕೋರ್ಟ್ ನಿರ್ದೇಶನ ನೀಡಿದ್ದು ರೈಲು ಮಾರ್ಗದ ಮೌಲ್ಯಮಾಪನ ನಡೆಸಿ ವರದಿಗೆ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments