ಪ್ರತಿ ವಾರ್ಡ್‌ವಾರು ಕುಂದುಕೊರತೆ ಕೋಶ ಸ್ಥಾಪನೆಗೆ ಹೈಕೋರ್ಟ್ ಸೂಚನೆ

Webdunia
ಬುಧವಾರ, 7 ಸೆಪ್ಟಂಬರ್ 2022 (16:19 IST)
ಬೆಂಗಳೂರು ಮಹಾನಗರದ ನಿವಾಸಿಗಳ ಸಮಸ್ಯೆ ನಿವಾರಣೆಗೆ ವಾರ್ಡ್‌ವಾರು ಕುಂದುಕೊರತೆ ಕೋಶವನ್ನು ತಕ್ಷಣವೇ ಸ್ಥಾಪಿಸಿ' ಎಂದು ಹೈಕೋರ್ಟ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ನಿರ್ದೇಶಿಸಿದೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚಲು ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸಬೇಕು' ಎಂದು ಕೋರಿ ವಿಜಯನ್ ಮೆನನ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
 
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಐಟಿ ಕಾರಿಡಾರ್ ನ ಹಲವು ಭಾಗಗಳು ಸೇರಿದಂತೆ
ಆಗ್ನೇಯ ಬೆಂಗಳೂರಿನ ವಿವಿಧೆಡೆ ಆಗಸ್ಟ್ 30 ರಿಂದ ಪದೇ ಪದೇ ಸುರಿಯುತ್ತಿರುವ ಮಳೆ ಮತ್ತು ಇದರಿಂದಾಗಿ ರಸ್ತೆಗಳ ದುಃಸ್ಥಿತಿ ಬಗ್ಗೆ ನ್ಯಾಯಪೀಠದ ಗಮನ ಸೆಳೆದರು. ಚರಂಡಿಗಳಿಂದ ತುಂಬಿ ಹರಿಯುತ್ತಿರುವ ನೀರಿನ ಸಮಸ್ಯೆಯನ್ನು ವಿವರಿಸಿದರು.
 
ಈ ಆಕ್ಷೇಪಣೆಗೆ ಬಿಬಿಎಂಪಿ ಪರ ವಕೀಲರು, "ನೀರು ನಿಂತಿರುವ ಭಾಗಗಳಲ್ಲಿ ಈಗಾಗಲೇ ಪಂಪ್ ಸೆಟ್‌ಗಳನ್ನು ಅಳವಡಿಸಿ ನೀರು ಖಾಲಿ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಅಧಿಕಾರಿಗಳು 24x7 ಕೆಲಸ ಮಾಡುತ್ತಿದ್ದಾರೆ. ನೆರೆಪೀಡಿತ ಪ್ರದೇಶಗಳಿಂದ ನೀರು ಹರಿಸಲು ವಲಯವಾರು ಮಟ್ಟದಲ್ಲಿ ನಿರಂತರ ಕ್ರಮ‌ ಕೈಗೊಳ್ಳಲಾಗಿದೆ" ಎಂದು ಸಮಜಾಯಿಷಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಕ್ ಮೇಲೆ ಕೂತಿದ್ದ ವ್ಯಕ್ತಿಗೆ ಹೈಟೆನ್ಷನ್ ತಂತಿ ತಗುಲಿದ ಭಯಾನಕ ವಿಡಿಯೋ

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಭ್ರಷ್ಟಾಚಾರ ಮುಚ್ಚಿಟ್ಟುಕೊಳ್ಳಲು ನಾಟಕ ಎಂದ ಆರ್ ಅಶೋಕ್

ಬಿಕ್ಲು ಶಿವ ಕೊಲೆ ಪ್ರಕರಣ: ಪೊಲೀಸ್‌ಗೆ ತಲೆನೋವಾದ ಬೈರತಿ ಬಸವರಾಜ್ ನಡವಳಿಕೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments