Webdunia - Bharat's app for daily news and videos

Install App

ಚುನಾವಣೆ ದಿನಾಂಕ ಘೋಷಿಸದಂತೆ ರಾಜ್ಯ ಚುನಾವಣೆ ಆಯೋಗಕ್ಕೆ ಹೈಕೋರ್ಟ್ ಆದೇಶ

Webdunia
ಸೋಮವಾರ, 20 ಏಪ್ರಿಲ್ 2015 (14:31 IST)
ಬೆಂಗಳೂರು ಮಹಾನಾಗರ ಪಾಲಿಕೆಯ ಚುನಾವಣೆ ದಿನಾಂಕ ಘೋಷಿಸದಂತೆ ಹೈಕೋರ್ಟ್‌ನ ವಿಭಾಗೀಯ ಪೀಠ ಚುನಾವಣೆ ಆಯೋಗಕ್ಕೆ ಆದೇಶ ನೀಡಿದೆ.

ದಿನಾಂಕ 22ರ ವರೆಗೆ ಬಿಬಿಎಂಪಿ ಚುನಾವಣೆ ದಿನಾಂಕವನ್ನು ಘೋಷಿಸದಂತೆ ಕೋರ್ಟ್ ಚುನಾವಣೆ ಆಯೋಗಕ್ಕೆ ಆದೇಶ ನೀಡಿದೆ. ಸುಮಾರು ಎರಡು ಗಂಟೆಗಳ ಕಾಲ ನಡೆದ ವಾದ ಪ್ರತಿವಾದವನ್ನು ಆಲಿಸಿದ ಹೈಕೋರ್ಟ್ ಚುನಾವಣೆ ಆಯೋಗಕ್ಕೆ ನಿರ್ದೇಶನ ನೀಡಿತು.

ಬಿಬಿಎಂಪಿ ವ್ಯಾಪ್ತಿಯಲ್ಲಿ 80 ಲಕ್ಷಕ್ಕೂ ಹೆಚ್ಚು ಜನರಿದ್ದು ಅಡಳಿತ ನಿರ್ವಹಣೆ ಕಷ್ಟವಾಗಿದೆ. ಆದ್ದರಿಂದ ಬಿಬಿಎಂಪಿಯನ್ನು ಮೂರು ಭಾಗಗಳಾಗಿ ವಿಂಗಡಿಸುವುದು ಅನಿವಾರ್ಯವಾಗಿದೆ ಎಂದು ಸರಕಾರದ ಪರ ವಕೀಲರು ಕೋರ್ಟ್‌ ಮುಂದೆ ವಾದ ಮಂಡಿಸಿದ್ದರು.

ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಕಾಂಗ್ರೆಸ್ ಪಕ್ಷ ಸಂಚು ರೂಪಿಸಿದೆ. ಯಾವುದೇ ಕಾರಣಕ್ಕೂ ಚುನಾವಣೆ ಮುಂದೂಡುವುದು ಬೇಡ ಎಂದು ಬಿಬಿಎಂಪಿ ಸದಸ್ಯರ ಪರ ವಕೀಲರು ಪ್ರತಿವಾದ ಮಂಡಿಸಿದರು.

ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯ ಏಪ್ರಿಲ್ 22 ರಂದು ಮತ್ತೆ ವಿಚಾರಣೆ ನಡೆಸಲು ತೀರ್ಮಾನಿಸಿ ಆದೇಶ ಹೊರಡಿಸಿತು.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments