Webdunia - Bharat's app for daily news and videos

Install App

ಮುಡಾ ಕೇಸ್ ನಲ್ಲಿ ಬಿಗ್ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ: ಹೈಕೋರ್ಟ್ ತೀರ್ಪಿನ ವಿವರ ಇಲ್ಲಿದೆ

Krishnaveni K
ಮಂಗಳವಾರ, 24 ಸೆಪ್ಟಂಬರ್ 2024 (12:41 IST)
ಬೆಂಗಳೂರು: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದ ಅರ್ಜಿಯ ತೀರ್ಪು ಪ್ರಕಟವಾಗಿದೆ. ಈ ತೀರ್ಪಿನಲ್ಲಿ ಸಿಎಂಗೆ ಬಿಗ್ ಶಾಕ್ ಸಿಕ್ಕಿದೆ. ತೀರ್ಪಿನ ವಿವರ ಇಲ್ಲಿದೆ.

ಪ್ರಾಸಿಕ್ಯೂಷನ್ ಗೆ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿದೆ. ಆ ಮೂಲಕ ರಾಜ್ಯಪಾಲರ ಕ್ರಮ ಸರಿಯಾಗಿದೆ ಎಂದು ಸೂಚಿಸಿದೆ. ಸಿಎಂ ಎತ್ತಿದ ಎಲ್ಲಾ ಕಾನೂನಿನ ಅಂಶಗಳನ್ನು ಕೋರ್ಟ್ ತಳ್ಳಿ ಹಾಕಿದೆ. ಸಿಎಂ ಸಿದ್ದರಾಮಯ್ಯ ಕುಟುಂಬಸ್ಥರು ಪಾಲುದಾರರಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸರಿಯಾಗಿದೆ ಎಂದು ಕೋರ್ಟ್ ತೀರ್ಪು ನೀಡಿದೆ.

ಕೋರ್ಟ್ ತೀರ್ಪು ಸಿಎಂ ಮುಖದಲ್ಲಿ ಚಿಂತೆಯ ಗೆರೆ ಮೂಡಿಸಿದೆ. ಈ ನಡುವೆ ಅವರ ಪರ ವಕೀಲರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ. ಇತ್ತ ದೂರುದಾರರಾದ ಸ್ನೇಹಮಯಿ ಕೃಷ್ಣ ಮತ್ತು ಅಬ್ರಹಾಂ ಕೂಡಾ ಜನಪ್ರತಿನಿಧಿಗಳ ಕೋರ್ಟ್ ಗೆ ದೂರು ನೀಡುವ ಸಾಧ್ಯತೆಯಿದೆ.

ಸಿಎಂ ವಿರುದ್ಧ ಖಾಸಗಿ ದೂರುದಾರರು ದೂರು ನೀಡಬಹುದು. ಸಂವಿಧಾನದ ವಿಧಿ 17 ಎ ಡಿ ಅಡಿಯಲ್ಲಿ ಅನುಮತಿ ನೀಡಿರುವುದು ಸರಿಯಾಗಿದೆ. ಸಚಿವ ಸಂಪುಟದ ನಿರ್ಧಾರವನ್ನು ರಾಜ್ಯಪಾಲರು ತಿರಸ್ಕರಿಸಬಹುದು ಎಂದು ಎಂ. ನಾಗಪ್ರಸನ್ನ ನೇತೃತ್ವದ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments