Webdunia - Bharat's app for daily news and videos

Install App

ಸ್ವಾತಂತ್ರ್ಯ ದಿನಚಾರಣೆಗೆ ರಾಷ್ಟ್ರಧ್ವಜಗಳಿಗೆ ಅಧಿಕ ಬೇಡಿಕೆ

Webdunia
ಬುಧವಾರ, 9 ಆಗಸ್ಟ್ 2023 (08:40 IST)
ಹುಬ್ಬಳ್ಳಿ : ಸ್ವಾತಂತ್ರ್ಯ ದಿನಚಾರಣೆಯ ಹಬ್ಬಕ್ಕೆ ಭಾರತ ಸಿದ್ಧವಾಗುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ಪೂರೈಸಿದ್ದು, ಸ್ವತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಿದ್ದೇವೆ.
 
ಇನ್ನು ದೇಶದ ಎಲ್ಲಡೆ ಗ್ರಾಮ ಪಂಚಾಯತ್ ಕಚೇರಿಯಿಂದ ದೆಹಲಿಯ ಕೆಂಪುಕೋಟೆ ಮೇಲೆ ಹಾರಾಡುವ ಧ್ವಜ ತಯಾರಾಗುವುದು ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ (ಫೆಡರೇಷನ್) ನಲ್ಲಿ. ಇದೀಗ ಸ್ವಾತಂತ್ರ್ಯ ದಿನಾಚರಣೆ ದ್ವಜಗಳ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ಇಲ್ಲಿ ಕೆಲಸ ಮಾಡುವ ಸಿಬ್ಬಂದಿ ಓವರ್ ಟೈಮ್ ಕೆಲಸ ಮಾಡುತ್ತಿದ್ದಾರೆ.

ಹೌದು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಮಾನದಂಡಗಳಿಗೆ ಅನುಗುಣವಾಗಿ ಕೈಯಿಂದ ನೂಲುವ ಮತ್ತು ಕೈಯಿಂದ ನೇಯ್ದು ಖಾದಿ ಬಟ್ಟೆಯಿಂದ ತ್ರಿವರ್ಣ ಧ್ವಜವನ್ನು ತಯಾರಿಸಬೇಕು. ಹೀಗಾಗಿ ಓವರ್ ಟೈಮ್ ಕೆಲಸ ಮಾಡಿ ಧ್ವಜಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುತ್ತಿದ್ದಾರೆ.

ರಾಷ್ಟ್ರೀಯ ಧ್ವಜ ಉತ್ಪಾದನಾ ಕೇಂದ್ರದಲ್ಲಿ ರಾಷ್ಟ್ರಧ್ವಜ ನಿರ್ಮಾಣದಲ್ಲಿ ತೊಡಗಿರುವವರಲ್ಲಿ ಹೆಚ್ಚಿನವರು ಮಹಿಳೆಯರೇ ಆಗಿದ್ದಾರೆ. ಇವರು ಸ್ವಾತಂತ್ರ್ಯ ದಿನ ಮತ್ತು ಗಣರಾಜ್ಯೋತ್ಸವದ ಸಮಯದಲ್ಲಿ ವರ್ಷದಲ್ಲಿ ಎರಡು ಬಾರಿ ಈ ಓವರ್ಟೈಮ್ ಕೆಲಸ ಮಾಡುತ್ತಾರೆ. ಇದೀಗ ಭಾನುವಾರದಂದು ಸಹ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಸಿಬ್ಬಂದಿಗೆ ವೇತನವು “ಅಷ್ಟು ಪ್ರೋತ್ಸಾಹದಾಯಕವಾಗಿಲ್ಲ.”

ನಾವು ಸುಮಾರು 15 ದಿನಗಳ ಹಿಂದೆ ಹೆಚ್ಚುವರಿ ಸಮಯವನ್ನು ಕೆಲಸ ಮಾಡಲು ಪ್ರಾರಂಭಿಸಿದ್ದೇವೆ ಮತ್ತು ಇದು ಆಗಸ್ಟ್ 13 ಸಂಜೆಯವರೆಗೆ ಮುಂದುವರಿಯುತ್ತದೆ. ರಾಷ್ಟ್ರಧ್ವಜಗಳ ತಯಾರಿಕೆ ವರ್ಷವಿಡೀ ನಡೆಯುತ್ತಿರುತ್ತದೆ. ಓವರ್ಟೈಮ್ ಸುಂಕವು ಆಗಸ್ಟ್ 15 ಮತ್ತು ಜನವರಿ 26 ರ ಮೊದಲು ಬರುತ್ತದೆ ಎಂದು ರಾಷ್ಟ್ರೀಯ ಧ್ವಜ ಉತ್ಪಾದನಾ ಕೇಂದ್ರದ ವ್ಯವಸ್ಥಾಪಕಿ ಅನ್ನಪೂರ್ಣ ಕೋಟಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments