Webdunia - Bharat's app for daily news and videos

Install App

ರಾಜ್ಯಕ್ಕೆ ಬಂತು ಹೈಟೆಕ್ ವರಹ

Webdunia
ಬುಧವಾರ, 16 ಅಕ್ಟೋಬರ್ 2019 (16:26 IST)
ರಾಜ್ಯದ ಕಡಲ ತೀರದಲ್ಲಿ ಕಣ್ಗಾವಲಿಡಲು ಬಂದಿರೋ ಹೈಟೆಕ್ ಶಿಪ್ ಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.

ಮಂಗಳೂರು ಕಡಲ ತೀರಕ್ಕೆ ಕಣ್ಗಾವಲಿಗಾಗಿ ಅತ್ಯಾಧುನಿಕ ಹಡಗು ವರಹ ಎಂಬ ಶಿಪ್ ಆಗಮಿಸಿದೆ. ಈ ನೂತನ ಶಿಪ್ ನ್ನು ಪಣಂಬೂರು ಕೋಸ್ಟ್‌ಗಾರ್ಡ್ ಕೇಂದ್ರದಲ್ಲಿ ಹಿರಿಯ ಅಧಿಕಾರಿ ರಾಜ್ ಕಮಲ್ ಸಿನ್ಹಾ, ಲಕ್ಷ್ಮೀಕಾಂತ್ ಗಜಿಭಿಯೆ, ಸಿಐಎಸ್ಎಫ್ ಅಧಿಕಾರಿ ಅಶುತೋಷ್ ಗೌರ್ ಮೊದಲಾದವರು ಸ್ವಾಗತಿಸಿದ್ರು.  ಕರ್ನಾಟಕ ಕರಾವಳಿಯಲ್ಲಿ ಕಣ್ಗಾವಲು ಇಡಲಿದೆ.

ಲಾರ್ಸನ್ ಆ್ಯಂಡ್ ಟರ್ಬೊ ಈ ನೂತನ ಹಡಗನ್ನು ನಿರ್ಮಿಸಿದೆ. ಸಮುದ್ರ ಮಾರ್ಗದಲ್ಲಿ ಕಳ್ಳಸಾಗಾಣಿಕೆ, ತೈಲ ಸೋರಿಕೆ, ತಪಾಸಣೆ, ಭದ್ರತೆಯ ಕಣ್ಗಾವಲು ಇರಿಸಲು ಈ ಹಡಗು ಬಳಸಲಾಗುತ್ತದೆ. ತುರ್ತು ಸಂದರ್ಭ ಎರಡು ಎಂಜಿನ್ಗಳ ಹೆಲಿಕಾಪ್ಟರ್ ಹೊತ್ತೊಯ್ಯಬಲ್ಲ ಈ ಹಡಗು, 30 ಎಂಎಂ ಗನ್,12.7 ಎಂಎಂ ಗನ್, ಅತ್ಯಾಧುನಿಕ ರಾಡಾರ್, ಸೆನ್ಸಾರ್ , ಹೈಸ್ಪೀಡ್ ಬೋಟ್‌ಗಳು ಮತ್ತಿತರ ಸೌಲಭ್ಯ ಇದರಲ್ಲಿದೆ.‌ 14 ಅಧಿಕಾರಿಗಳು ಮತ್ತು 89 ಮಂದಿ ಸಿಬ್ಬಂದಿಯನ್ನು ಈ ಹಡಗು ಹೊಂದಿದೆ.

ಯಾವುದೇ ಕ್ಷಣದಲ್ಲಿ ಕಾರ್ಯಾಚರಣೆಗೆ ಸಿದ್ಧವಾಗಲಿದೆ. ಪಶ್ಚಿಮ ಕೋಸ್ಟ್‌ಗಾರ್ಡ್ ಕಮಾಂಡಿಗ್ ಕೇಂದ್ರ ಇದರ ನಿಯಂತ್ರಣ ಹೊಂದಿದೆ. 2,100 ಟನ್ ಭಾರದ ಈ ಹಡಗು ಗಂಟೆಗೆ 26 ನಾಟಿಕಲ್ ಮೈಲ್ ವೇಗದಲ್ಲಿ ಸಂಚರಿಸುತ್ತದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments