ರಾಜ್ಯಕ್ಕೆ ಬಂತು ಹೈಟೆಕ್ ವರಹ

Webdunia
ಬುಧವಾರ, 16 ಅಕ್ಟೋಬರ್ 2019 (16:26 IST)
ರಾಜ್ಯದ ಕಡಲ ತೀರದಲ್ಲಿ ಕಣ್ಗಾವಲಿಡಲು ಬಂದಿರೋ ಹೈಟೆಕ್ ಶಿಪ್ ಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.

ಮಂಗಳೂರು ಕಡಲ ತೀರಕ್ಕೆ ಕಣ್ಗಾವಲಿಗಾಗಿ ಅತ್ಯಾಧುನಿಕ ಹಡಗು ವರಹ ಎಂಬ ಶಿಪ್ ಆಗಮಿಸಿದೆ. ಈ ನೂತನ ಶಿಪ್ ನ್ನು ಪಣಂಬೂರು ಕೋಸ್ಟ್‌ಗಾರ್ಡ್ ಕೇಂದ್ರದಲ್ಲಿ ಹಿರಿಯ ಅಧಿಕಾರಿ ರಾಜ್ ಕಮಲ್ ಸಿನ್ಹಾ, ಲಕ್ಷ್ಮೀಕಾಂತ್ ಗಜಿಭಿಯೆ, ಸಿಐಎಸ್ಎಫ್ ಅಧಿಕಾರಿ ಅಶುತೋಷ್ ಗೌರ್ ಮೊದಲಾದವರು ಸ್ವಾಗತಿಸಿದ್ರು.  ಕರ್ನಾಟಕ ಕರಾವಳಿಯಲ್ಲಿ ಕಣ್ಗಾವಲು ಇಡಲಿದೆ.

ಲಾರ್ಸನ್ ಆ್ಯಂಡ್ ಟರ್ಬೊ ಈ ನೂತನ ಹಡಗನ್ನು ನಿರ್ಮಿಸಿದೆ. ಸಮುದ್ರ ಮಾರ್ಗದಲ್ಲಿ ಕಳ್ಳಸಾಗಾಣಿಕೆ, ತೈಲ ಸೋರಿಕೆ, ತಪಾಸಣೆ, ಭದ್ರತೆಯ ಕಣ್ಗಾವಲು ಇರಿಸಲು ಈ ಹಡಗು ಬಳಸಲಾಗುತ್ತದೆ. ತುರ್ತು ಸಂದರ್ಭ ಎರಡು ಎಂಜಿನ್ಗಳ ಹೆಲಿಕಾಪ್ಟರ್ ಹೊತ್ತೊಯ್ಯಬಲ್ಲ ಈ ಹಡಗು, 30 ಎಂಎಂ ಗನ್,12.7 ಎಂಎಂ ಗನ್, ಅತ್ಯಾಧುನಿಕ ರಾಡಾರ್, ಸೆನ್ಸಾರ್ , ಹೈಸ್ಪೀಡ್ ಬೋಟ್‌ಗಳು ಮತ್ತಿತರ ಸೌಲಭ್ಯ ಇದರಲ್ಲಿದೆ.‌ 14 ಅಧಿಕಾರಿಗಳು ಮತ್ತು 89 ಮಂದಿ ಸಿಬ್ಬಂದಿಯನ್ನು ಈ ಹಡಗು ಹೊಂದಿದೆ.

ಯಾವುದೇ ಕ್ಷಣದಲ್ಲಿ ಕಾರ್ಯಾಚರಣೆಗೆ ಸಿದ್ಧವಾಗಲಿದೆ. ಪಶ್ಚಿಮ ಕೋಸ್ಟ್‌ಗಾರ್ಡ್ ಕಮಾಂಡಿಗ್ ಕೇಂದ್ರ ಇದರ ನಿಯಂತ್ರಣ ಹೊಂದಿದೆ. 2,100 ಟನ್ ಭಾರದ ಈ ಹಡಗು ಗಂಟೆಗೆ 26 ನಾಟಿಕಲ್ ಮೈಲ್ ವೇಗದಲ್ಲಿ ಸಂಚರಿಸುತ್ತದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಾಸಕರು ವಿದೇಶ ಪ್ರವಾಸ ಹೋಗಿದ್ದು ನನಗೆ ಗೊತ್ತೇ ಇಲ್ಲ ಎಂದ ಡಿಕೆ ಶಿವಕುಮಾರ್: ಅಶೋಕ್ ಟಾಂಗ್

ನಾಳೆ ಕೆಎಸ್ಆರ್ ಟಿಸಿ ಬಸ್ ಗಾಗಿ ಕಾದರೆ ತೊಂದರೆ ಗ್ಯಾರಂಟಿ

ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯಗೇ ಶಾಕ್ ಕೊಟ್ಟ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments