Webdunia - Bharat's app for daily news and videos

Install App

ವಾಹನ ದಟ್ಟಣೆ ಕಡಿಮೆ ಮಾಡಲು ಹೈಟೆಕ್ ತಂತ್ರಜ್ಞಾನದ ಮೊರೆ...!

Webdunia
ಮಂಗಳವಾರ, 7 ಆಗಸ್ಟ್ 2018 (15:56 IST)
ಸಾಂಸ್ಕೃತಿಕ ನಗರಿಯ ಸಂಚಾರಿ ದಟ್ಟಣೆಯನ್ನ ಕಡಿಮೆ ಮಾಡಲು ಪೊಲೀಸರು ಹೈ ಟೆಕ್ ತಂತ್ರಜ್ಞಾನದ ಮೊರೆ ಹೋಗಿದ್ದು, ಪ್ರಮುಖ ರಸ್ತೆಗಳಲ್ಲಿರುವ ವಾಹನ ದಟ್ಟಣೆಯ ಬಗ್ಗೆ ಡಿಜಿಟಲ್‌ ಎಲೆಕ್ಟ್ರಾನಿಕ್ ಡಿಸ್‌ಪ್ಲೇ ಬೋರ್ಡ್ ಗಳ ಮೂಲಕ ಪ್ರದರ್ಶನ ಮಾಡಲಾಗುತ್ತದೆ.

ವಿಶ್ವವಿಖ್ಯಾತ ಮೈಸೂರು ದಸರಾ ಸಮೀಪಿಸುತ್ತಿರುವ ಹಿನ್ನಲ್ಲೆಯಲ್ಲಿ ವಾಹನ ದಟ್ಟಣೆಯನ್ನ ನಿಯಂತ್ರಣ ಮಾಡಲು ಮೈಸೂರು ನಗರ ಸಂಚಾರಿ ಪೊಲೀಸರು ಹೈಟೆಕ್ ತಂತ್ರಜ್ಞಾನದ ಮೋರೆ ಹೋಗಿದ್ದಾರೆ. ನಗರದಲ್ಲಿ ಎಲ್ಲೆಲ್ಲಿ ವಾಹನ ಸಂಚಾರದ ದಟ್ಟಣೆ ಯಾವ ಸಮಯದಲ್ಲಿ ಹೆಚ್ಚಾಗಿರುತ್ತದೆ ಎಂಬ ಬಗ್ಗೆ ಈಗಾಗಲೇ ಸರ್ವೆ ಮಾಡಿರುವ ಪೊಲೀಸರು ಮತ್ತು ಅದಕ್ಕೆ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.

ನಾಲ್ಕು ಡಿಜಿಟಲ್ ಬೋರ್ಡ್ ಗಳ ಅಳವಡಿಕೆ:

ದಸರಾ ಸಂಧರ್ಭದಲ್ಲಿ ಮೈಸೂರಿಗೆ ಪ್ರವಾಸಿಗರು ಸಂಜೆ ಸಮಯದಲ್ಲಿ ಕುಟುಂಬ ಸಮೇತ ನಗರದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳನ್ನ ನೋಡಲು ಬರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿ ಕೆಲ ಸಮಯ ಟ್ರಾಫಿಕ್ ಜಾಮ್ ಆಗುವ ಸಮಸ್ಯೆ ಇರುತ್ತದೆ. ಈ ಹಿನ್ನಲ್ಲೆಯಲ್ಲಿ ದಸರಾ ಮುಗಿಯುವವರೆಗೂ ನಗರದ ಕೆಲವೊಂದು ರಸ್ತೆಗಳನ್ನ ಏಕ ಮುಖ ಸಂಚಾರ ಮಾಡುತ್ತಾರೆ. ಆದರೂ ಸಹ ವಾಹನ ದಟ್ಟಣೆ ಹೆಚ್ಚಾದರಿಂದ ಈ ಬಾರಿ ನಾಲ್ಕು ಡಿಜಿಟಲ್ ಬೋರ್ಡ್ ಗಳನ್ನ ನಗರದ ಕೋಟೆ ಆಂಜನೇಯ ದೇವಸ್ಥಾನ, ಬೆಂಗಳೂರು-ಮೈಸೂರು ರಿಂಗ್ ರೋಡ್, ಬಲ್ಲಾಳ್ ಸರ್ಕಲ್ ಮತ್ತು ನಂಜನಗೂಡು-ಮೈಸೂರು ಮುಖ್ಯರಸ್ತೆಯಲ್ಲಿ ಡಿಜಿಟಲ್‌ ಎಲೆಕ್ಟ್ರಾನಿಕ್ ಡಿಸ್‌ಪ್ಲೇ ಬೋರ್ಡ್ ಗಳನ್ನ ಅಳವಡಿಕೆ ಮಾಡಲಾಗಿದೆ.

ಇಲೆಕ್ಟ್ರಾನಿಕ್ ಡಿಸ್‌ಪ್ಲೇ ಬೋರ್ಡ್ ಕೆಲಸವೇನು?

ಇಲೆಕ್ಟ್ರಾನಿಕ್ ಡಿಸ್ ಪ್ಲೇ ಬೋರ್ಡ್ ಗಳು ನಗರದಲ್ಲಿ ಪ್ರಸ್ತುತವಿರುವ ಹವಾಮಾನದ ಮಾಹಿತಿಯನ್ನು ನೀಡುತ್ತವೆ. ಜೊತೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಇರುವ ವಾಹನ ದಟ್ಟಣೆಯನ್ನ ಹೆಚ್ಚಾಗಿದೆ, ಕಡಿಮೆ ಇದೆ ಎಂದು ಬೋರ್ಡ್ ನಲ್ಲಿ ತಿಳಿಸುತ್ತದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments