Publish Date: Sat, 05 Aug 2023 (08:17 IST)
Updated Date: Sat, 05 Aug 2023 (08:18 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ (ಆ.5) ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಎರಡು ಹಂತದಲ್ಲಿ ಸಭೆ ನಡೆಯಲಿದೆ.
ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಲೋಕಸಭೆ ಸ್ಥಾನಗಳನ್ನ ಗೆಲ್ಲುವುದು ಕಾಂಗ್ರೆಸ್ ಗುರಿಯಾಗಿದ್ದು, ಇದಕ್ಕೆ ಸಂಬಂಧಿಸಿ ನಾಳೆಯ ಸಭೆಯಲ್ಲಿ ಕಾರ್ಯತಂತ್ರಗಳು ರೂಪುಗೊಳ್ಳಲಿವೆ.
ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಲ್ಲಿ ಯಾವ ತಂತ್ರ ಅನುಸರಿಸಬೇಕು? ವಿಪಕ್ಷಗಳು ಮೈತ್ರಿ ಮಾಡಿಕೊಳ್ಳದೇ ಕಣಕ್ಕೆ ಇಳಿದಲ್ಲಿ ಏನು ಮಾಡಬೇಕು? ಎಂಬ ಬಗ್ಗೆ ಚರ್ಚೆಗಳು ನಡೆಯಲಿವೆ.