Webdunia - Bharat's app for daily news and videos

Install App

15 ಡಿನೋಟಿಫಿಕೇಶನ್ ಪ್ರಕರಣ ಹೈಕೋರ್ಟ್‌ನಿಂದ ರದ್ದು: ಯಡಿಯೂರಪ್ಪ ನಿರಾಳ

Webdunia
ಮಂಗಳವಾರ, 5 ಜನವರಿ 2016 (15:52 IST)
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ಯಡಿಯೂರಪ್ಪ ವಿರುದ್ಧ 15 ಎಫ್‌ಐಆರ್ ದಾಖಲಿಸಲಾಗಿತ್ತು. ತಮ್ಮ ವಿರುದ್ದ ಪ್ರಕರಣಗಳು ರದ್ದಾಗಿರುವುದರಿಂದ ಯಡಿಯೂರಪ್ಪ ಈಗ ನಿರಾಳರಾಗಿದ್ದಾರೆ.  15 ಡಿನೋಟಿಫಿಕೇಶನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.

ಸಿಎಜಿ ವರದಿ ಆಧರಿಸಿ ಜಯಕುಮಾರ್ ಹಿರೇಮಠ್ ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ಸಿಐಡಿ ತನಿಖೆ ಆರಂಭಿಸಿತ್ತು. ಬಳಿಕ ಲೋಕಾಯುಕ್ತ  ಪೊಲೀಸರು 15 ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಯಡಿಯೂರಪ್ಪ 15 ತಕರಾರು ಅರ್ಜಿ ಸಲ್ಲಿಸಿ ತಮ್ಮ ವಿರುದ್ಧ ಎಫ್‌ಐಆರ್ ರದ್ದು ಮಾಡುವಂತೆ ಕೋರಿದ್ದರು.

 ಸಿಎಜಿ ವರದಿ ಆಧರಿಸಿ ಎಫ್‌ಐಆರ್ ದಾಖಲಿಸಿದ್ದು ಸರಿಯಲ್ಲ ಎಂದು ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಿ, ಯಡಿಯೂರಪ್ಪ ವಿರುದ್ಧ ಪ್ರಕರಣಗಳನ್ನು ರದ್ದುಮಾಡಿದೆ. ಹೈಕೋರ್ಟ್ ತೀರ್ಪಿನಿಂದ ಬಿಎಸ್‌ವೈ ಎಲ್ಲಾ ಪ್ರಕರಣಗಳಿಂದ ಆರೋಪಮುಕ್ತರಾಗಿ ರಾಜಕೀಯ ದಾರಿ ಸುಗಮವಾಗಿದೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments