ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಈ ವರ್ಷವೇ 8,500 ಸ್ಮಾರ್ಟ್‌ಕ್ಲಾಸ್‌ ರೂಂ ಅಭಿವೃದ್ಧಿ: ಡಿಸಿಎಂ

Webdunia
ಶನಿವಾರ, 10 ಜುಲೈ 2021 (18:55 IST)
ಬೆಂಗಳೂರು: ಕೋವಿಡ್‌ ಸಂಕಷ್ಟ ಕಾಲದಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗದಂತೆ ರಾಜ್ಯ ಸರಕಾರವು ಡಿಜಿಟಲ್‌ ಕಲಿಕೆಗೆ ಹೆಚ್ಚು ಒತ್ತು ನೀಡಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. 
 
ಶನಿವಾರ ಮಲ್ಲೇಶ್ವರದಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಣೆ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ ಮಾಡಿ ಅವರು ಮಾತನಾಡಿದರು. 
 
ಕೆಲ ದಿನಗಳಲ್ಲೇ ರಾಜ್ಯದ ಉನ್ನತ ಶಿಕ್ಷಣ ವಿಭಾಗದಲ್ಲಿರುವ 8,500 ತರಗತಿ ಕೊಠಡಿಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಸ್ಮಾರ್ಟ್‌ಕ್ಲಾಸ್‌ ರೂಂಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಈ ಪೈಕಿ 2,500 ಕೊಠಡಿಗಳನ್ನು ಈಗಾಗಲೇ ಸ್ಮಾರ್ಟ್‌ಕ್ಲಾಸ್‌ ರೂಂಗಳನ್ನಾಗಿ ಅಭಿವೃದ್ಧಿಪಡಿಸಲಾಗಿದೆ. ಈ ಕಾಲೇಜಿನಲ್ಲೂ ಎಲ್ಲ ತರಗತಿ ಕೊಠಡಿಗಳನ್ನೂ ಸ್ಮಾರ್ಟ್‌ಕ್ಲಾಸ್‌ ರೂಂಗಳನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದು ಡಿಸಿಎಂ ಹೇಳಿದರು. 
 
ಇದಕ್ಕೆ ಪೂರಕವಾಗಿ ಕಳೆದ ಶೈಕ್ಷಣಿಕ ವರ್ಷದಲ್ಲಿ 1.10 ಲಕ್ಷ ಲ್ಯಾಪ್‌ಟಾಪ್‌ಗಳನ್ನು ಎಲ್ಲ ಪದವಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿತ್ತು. ಅದಕ್ಕಾಗಿ 330 ಕೋಟಿ ರೂ. ಖರ್ಚು ಮಾಡಲಾಗಿತ್ತು. ಅದೇ ರೀತಿ ಈ ಶೈಕ್ಷಣಿಕ ವರ್ಷದಲ್ಲಿ 1.60 ಲಕ್ಷದಷ್ಟು ಎಂಜಿನಿಯರಿಂಗ್‌, ಪಾಲಿಟೆಕ್ನಿಕ್‌ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಣೆ ಮಾಡಲಾಗಿದೆ ಎಂದು ಅವರು ಹೇಳಿದರು. 
 
ವಿದ್ಯಾರ್ಥಿಗಳಿಗೆ ಡಿಜಿಟಲ್‌ ಪರಿಕರಗಳನ್ನು ಕೊಟ್ಟು ಸುಮ್ಮನಾಗಲಿಲ್ಲ ಸರಕಾರ. ಬದಲಿಗೆ ಕಲಿಕಾ ವ್ಯವಸ್ಥೆಯನ್ನು ರೂಪಿಸಿತು. ಇಡೀ ದೇಶದಲ್ಲಿ ಯಾವ ರಾಜ್ಯದಲ್ಲೂ ಇಲ್ಲದ ಕ್ರಾಂತಿಕಾರಿ ವ್ಯವಸ್ಥೆ ಇದು. ಯಾವುದೇ ಖಾಸಗಿ ವಿವಿಗೂ ರೂಪಿಸಲು ಸಾಧ್ಯವಾಗದ ಉಪಕ್ರಮ ಇದು ಎಂದರು ಡಿಸಿಎಂ. 
 
ಅತ್ಯುತ್ತಮ ಕಂಟೆಂಟ್‌ ಜತೆಗೆ, ಪರಿಣಾಮಕಾರಿ ಕಲಿಕೆ ಎಲ್ಲ ಆಯಾಮಗಳಲ್ಲೂ ಸಹಕಾರಿಯಾದ ವ್ಯವಸ್ಥೆ ಇದು. 3.5 ಲಕ್ಷ ತರಗತಿಗಳನ್ನು ನಮ್ಮದೇ ಬೋಧಕರು ಅಪ್‌ಲೋಡ್‌ ಮಾಡಿದ್ದಾರೆ.  ಇಂಥ ಅದ್ಭುತ ಯೋಜನೆಗೆ ಸರಕಾರ ಖರ್ಚು ಮಾಡಿದ್ದು ಕೇವಲ 4 ಕೋಟಿ ರೂ. ಮಾತ್ರ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು. 
 
ಇಂಥ ಉತ್ತಮ ಅವಕಾಶಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಜನೆ ಮಾಡಬೇಕು. ಯಾವುದೇ ಕಾರಣಕ್ಕೂ ಮೈಮರೆಯಬಾರದು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 
 
ಕಾಲೇಜಿನ ಪ್ರಾಂಶುಪಾಲರಾದ ಡಾ.ಡಿ.ಎಸ್.ಪ್ರತಿಮಾ‌, ಐಕ್ಯೂಎಸಿ ಸಂಚಾಲಕ ಡಾ.ಸಿ.ಸ್ವಾಮಿನಾಥನ್‌ ಹಾಗೂ ನ್ಯಾಕ್‌ ಸಂಚಾಲಕಿ ಪಿ.ಎನ್.‌ಜಯಂತಿ ಹಾಗೂ ಪ್ರಾಧ್ಯಾಪಕರಾದ ರವಿಶಂಕರ್‌, ರವಿಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೂರದೃಷ್ಟಿಯ ನಾಯಕ, ನಿಟ್ಟೆ ಶಿಕ್ಷಣ ಸಂಸ್ಥೆಗಳ ನಿರ್ಮಾತೃ ಡಾ.ಎನ್‌.ವಿನಯ ಹೆಗ್ಡೆ ಇನ್ನಿಲ್ಲ

ಹೊಸ ವರ್ಷದ ಸಂಭ್ರಮದಲ್ಲಿ ಮಿಂದೆದ್ದ ಯುವ ಜನತೆ: ಪ್ರಧಾನಿ, ರಾಷ್ಟ್ರಪತಿ ಕೊಟ್ಟ ಸಂದೇಶವೇನು

Gold Price: ಗುಡ್ ನ್ಯೂಸ್, ಹೊಸ ವರ್ಷದಂದೇ ಚಿನ್ನದ ಬೆಲೆಯಲ್ಲಿ ಇಳಿಕೆ

ಬೆಂಗಳೂರು ನ್ಯೂ ಇಯರ್ ಪಾರ್ಟಿ: ಕುಡಿದ ಮತ್ತಿನಲ್ಲಿ ತೂರಾಟ, ರಸ್ತೆಯಲ್ಲೇ ಯುವಜನರ ರಂಪಾಟ Video

ಒಂದೇ ವೇದಿಕೆಯಲ್ಲಿ ಶ್ರೀ ನಾರಾಯಣ ಗುರುಗಳ ಉಪದೇಶದ ಬಗ್ಗೆ ಸಿದ್ದು, ಪಿಣರಾಯಿ ಗುಣಗಾನ

ಮುಂದಿನ ಸುದ್ದಿ
Show comments