Webdunia - Bharat's app for daily news and videos

Install App

ಅಂಗನವಾಡಿ ಕಾರ್ಯಕರ್ತೆಯ ಅಪಹರಣ: ದೂರು ದಾಖಲು

Webdunia
ಮಂಗಳವಾರ, 26 ಮೇ 2015 (13:06 IST)
ಕಾರ್ಯ ನಿಮಿತ್ತ ತೆರಳುತ್ತಿದ್ದ ಅಂಗನವಾಡಿ ಶಿಕ್ಷಕಿಯೋರ್ವಳನ್ನು ದುಷ್ಕರ್ಮಿಗಳು ಅಪಹರಿಸಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ತವಳುತಾಂಡ ಎಂಬ ಗ್ರಾಮದಲ್ಲಿ ನಡೆದಿದೆ. 
 
ಅಪಹರಣಕ್ಕೊಳಗಾದ ಮಹಿಳೆಯನ್ನು ಸೋನುಭಾಯಿ(30) ಎಂದು ಹೇಳಲಾಗಿದ್ದು, ಇಲ್ಲಿನ ಸೋಫಿಯಾ ತಾಂಡಾದ ನಿವಾಸಿ ಎಂದು ಹೇಳಲಾಗಿದೆ.  
 
ಪ್ರಕರಣದ ಹಿನ್ನೆಲೆ: ಮಹಿಳೆಯು ಎಂದಿನಂತೆ ಇಂದೂ ಕೂಡ ಕರ್ತವ್ಯಕ್ಕೆ ಹಾಜರಾಗುತ್ತಿದ್ದರು ಈ ವೇಳೆ ಅಂಗನವಾಡಿಗೆ ತೆರಳುವ ಮುನ್ನವೇ ಅಡ್ಡಗಟ್ಟಿರುವ ಅನಾಮಧೇಯ ಕಿಡಿಗೇಡಿಗಳು ಆಕೆಯನ್ನು ಅಪಹರಿಸಿದ್ದಾರೆ ಎನ್ನಲಾಗಿದೆ. 
 
ಪತ್ನಿ ಅಂಗನವಾಡಿಯಲ್ಲಿದ್ದಾಳೆ ಎಂಬ ಕಾರಣದಿಂದ ಆಕೆಯ ಪತಿ ಅಂಗನವಾಡಿ ಕೇಂದ್ರಕ್ಕೆ ಬಂದಿದ್ದಾರೆ. ಆದರೆ ಅಲ್ಲಿ ಆಕೆ ಇಲ್ಲದ್ದು ಕಂಡು ಬಂದಿದೆ. ಇದರಿಂದ ಭಯಭೀತನಾದ ಪತಿ ಪೊಲೀಸರಿಗೆ ದೂರು ನೀಡಿದ್ದಾರೆ. 
 
ಇನ್ನು ಪತಿ ದೂರಿನನ್ವಯ ದೇವದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಹಿಳೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಅಲ್ಲದೆ ಹಳೆಯ ದ್ವೇಷವೇ ಇದಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments