Webdunia - Bharat's app for daily news and videos

Install App

ಅರಣ್ಯದಲ್ಲಿನ ಅಗ್ನಿ ಅವಘಡಕ್ಕೆ ಹೆದ್ದಾರಿ ಬಂದ್!

Webdunia
ಶನಿವಾರ, 23 ಫೆಬ್ರವರಿ 2019 (17:09 IST)
ಬಂಡೀಪುರ ಅರಣ್ಯದಲ್ಲಿ ಮತ್ತೆ ಅಗ್ನಿಯ ರುದ್ರ ನರ್ತನ ಕಾಣಿಸಿಕೊಂಡಿದೆ. ಇದರಿಂದಾಗಿ ಸುತ್ತಲಿನ ಜನರು ಹಾಗೂ ವಾಹನಗಳ ಸವಾರರು ಪರದಾಡುತ್ತಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಊಟಿ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 67ರ ಬಳಿಯಲ್ಲೇ ಹೊತ್ತಿ ಉರಿಯುತ್ತಿರುವ ಅರಣ್ಯದಿಂದಾಗಿ ಸುತ್ತೆಲ್ಲ ದಟ್ಟ ಹೊಗೆ ಆವರಿಸಿದೆ. ಮೆಲುಕಾಮನಹಳ್ಳಿ ಬಳಿಯಲ್ಲೇ ವಾಹನಗಳನ್ನು ತಡೆಯುತ್ತಿರುವ ಸಿಬ್ಬಂದಿ, ಸಂಚಾರ ಸ್ಥಗಿತಗೊಳಿಸಿದ್ದಾರೆ.

ಮೆಲುಕಾಮನಹಳ್ಳಿ, ಜಕ್ಕಳ್ಳಿ, ಮಂಗಲ ಪ್ರದೇಶದ ಸುತ್ತಲಿನ ಗುಡ್ಡಗಳು ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ನಿರತವಾಗಿದ್ದರೂ, ಕೆನ್ನಾಲಿಗೆ ವ್ಯಾಪಕವಾಗಿ ಚಾಚಿರುವುದರಿಂದ ಬೆಂಕಿ ನಂದಿಸಲು ಹೆಚ್ಚಿನ ಶ್ರಮ ಪಡಬೇಕಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments