Webdunia - Bharat's app for daily news and videos

Install App

ಹಿಜಾಬ್-ಕೇಸರಿ ಶಾಲು ವಿವಾದ: ಮಾಜಿ ಪ್ರಧಾನಿ ಹೇಳಿದ್ದೇನು.?

Webdunia
ಮಂಗಳವಾರ, 8 ಫೆಬ್ರವರಿ 2022 (20:53 IST)
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಈ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರತಿಕ್ರಿಯಿಸಿದ್ದು,’2023ರ ವಿಧಾನಸಭಾ ಚುನಾವಣೆಗೆ ಕರ್ನಾಟಕದ ರಾಜಕೀಯ ಪಕ್ಷಗಳು ಹಿಜಾಬ್ ವಿಷಯದ ಲಾಭ ಪಡೆಯುತ್ತಿವೆ’ ಎಂದು ಹೇಳಿದ್ದಾರೆ.
‘ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಕೆಲವು ಅಂಶಗಳು ಕೂಡ ಇದರಲ್ಲಿದ್ದು, ರಾಜಕೀಯ ಪಕ್ಷಗಳು 2023ರ ಚುನಾವಣೆಗಳ ಲಾಭವನ್ನು ಪಡೆಯುತ್ತಿವೆ. ಸರ್ಕಾರ ಇದನ್ನು ನಿಲ್ಲಿಸಬಹುದು. ಇಂತಹ ವಿಷಯಗಳು ದೇಶವನ್ನು ವಿಭಜಿಸುತ್ತವೆ’ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರತಿಕ್ರಿಯಿಸಿದ್ದಾರೆ.
ಇನ್ನು, ಹಿಜಾಬ್-ಕೇಸರಿ ಶಾಲು ವಿವಾದ ರಾಜ್ಯದಾತ್ಯಂತ ತಾರಕಕ್ಕೇರಿದ್ದು,ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಧ್ವಜ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಲಾಗಿದ್ದು,ಕಾಲೇಜಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಅಲ್ಲದೆ ಜಾಬ್ ನಲ್ಲಿ ಬಂದ ವಿದ್ಯಾರ್ಥಿನಿಯರು ಮತ್ತು ಕೇಸರಿ ಶಾಲು ಹಾಕಿ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ್ದರಿಂದ ಉಡುಪಿಯ ಎಂಜಿಎಂ ಕಾಲೇಜಿನ ಹೊರಗಡೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಕಾಲೇಜಿಗೆ 1 ದಿನ ರಜೆ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments