Webdunia - Bharat's app for daily news and videos

Install App

ಪಾದಯಾತ್ರೆ : ಇಂದಿನಿಂದ ಡಿಕೆಶಿ 3 ದಿನ ಮೌನ!

Webdunia
ಮಂಗಳವಾರ, 11 ಜನವರಿ 2022 (06:57 IST)
ರಾಮನಗರ : ಕಾಂಗ್ರೆಸ್ ಹಮ್ಮಿಕೊಂಡಿರುವ ಮೇಕೆದಾಟು ಸಂಘರ್ಷ ಇಂದು 3ನೇ ದಿನಕ್ಕೆ ಕಾಲಿಟ್ಟಿದೆ.

ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಇಂದು ಕನಕಪುರದಿಂದ ಬೆಳಗ್ಗೆ 9.30ಕ್ಕೆ ಮುಂದುವರಿಯಲಿದೆ. ಪಾದಯಾತ್ರೆಯು ಮಧ್ಯಾಹ್ನ 1 ಗಂಟೆಗೆ ವೀರಭದ್ರಸ್ವಾಮಿ ದೇಗುಲ ಬಳಿ ಆಗಮನವಾಗಲಿದ್ದು, ಗಾಣಾಳು ವೀರಭದ್ರಸ್ವಾಮಿ ದೇಗುಲದ ಬಳಿಗೆ ತಲುಪಲಿದೆ.

ಕಾಂಗ್ರೆಸ್ ಕಾರ್ಯಕರ್ತರು ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ಊಟ ಮಾಡಿ ನಂತರ ವಿಶ್ರಾಂತಿ ಪಡೆದು ಪಾದಯಾತ್ರೆ ಮೂಲಕ ಸಂಜೆ ವೇಳೆಗೆ ಚಿಕ್ಕೇನಹಳ್ಳಿ ತಲುಪಲಿದ್ದಾರೆ. ಇಂದು ರಾತ್ರಿ ಚಿಕ್ಕೇನಹಳ್ಳಿಯಲ್ಲಿ ಕಾಂಗ್ರೆಸ್ ನಾಯಕರು ವಾಸ್ತವ್ಯ ಹೂಡಲಿದ್ದಾರೆ.

 ಈ ಮಧ್ಯೆ ಜ್ವರದಿಂದ ಬಳಲಿದ ಸಿದ್ದರಾಮಯ್ಯ ಅವರು ಪಾದಯಾತ್ರೆಗೆ ಮರಳಿ ಬರ್ತಾರಾ..? ಕನಕಪುರದಿಂದ ಕಾಲ್ನಡಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸಾಥ್ ಕೊಡ್ತಾರಾ ಎಂಬುದು ಕುತೂಹಲಕಾರಿಯಾಗಿದೆ.

ಮೇಕೆದಾಟು ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದಿನಿಂದ ಮೂರು ದಿನ ಮೌನ ವ್ರತಾಚರಣೆ ನಡೆಸು ತೀರ್ಮಾನತೆಗೆದುಕೊಂಡಿದ್ದು, ಅಚ್ಚರಿ ಮೂಡಿಸಿದ್ದಾರೆ.
ರಾಜಕೀಯ ಸಲಹಾ ತಂಡ ನೀಡಿರುವ ಸಲಹೆ ಮೇರೆಗೆ ಡಿ ಕೆ ಶಿವಕುಮಾರ್ ಈ ನಿರ್ಧಾರಕ್ಕೆ ಬಂದಿದ್ದಾರೆ. ಆದರೆ ಮೂರು ದಿನಗಳ ಮೌನ ಬೇಡ ಎಂದೂ ಇತರ ನಾಯಕರು ಸಲಹೆ ನೀಡಿದ್ದಾರೆ. ಪಾದಯಾತ್ರೆ ಸಂದರ್ಭದಲ್ಲಿ ಮಾತನಾಡಿದರೆ ಜನಗಳಿಗೆ ಸಂದೇಶ ರವಾನೆಯಾಗಲಿದೆ, ಹೀಗಾಗಿ ಮಾತನಾಡಿ ಎಂದಿರುವ ಹಿರಿಯ ನಾಯಕರು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ಯಾಕೆ ಚಿಕ್ಕ ವಯಸ್ಸಿನ ಹುಡುಗನ ಕಡೆಗೆ ಆಕರ್ಷಿತರಾಗುತ್ತಾರೆ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments