Webdunia - Bharat's app for daily news and videos

Install App

ಈದ್ ಮಿಲಾದ್ ದಿನ ನಾವೂ ದಾಳಿ ಮಾಡಿದ್ರೆ ಹೇಗಿರುತ್ತೆ: ಹಿಂದೂ ಕಾರ್ಯಕರ್ತನಿಂದ ಎಚ್ಚರಿಕೆ

Krishnaveni K
ಶುಕ್ರವಾರ, 13 ಸೆಪ್ಟಂಬರ್ 2024 (09:47 IST)
Photo Credit: Facebook
ಮಂಗಳೂರು: ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕೋಮುಗಲಭೆಗೆ ಪ್ರತ್ಯುತ್ತರ ನೀಡುವ ಭರದಲ್ಲಿ ಹಿಂದೂ ಕಾರ್ಯಕರ್ತ ಶರಣ್ ಪಂಪ್ ವೆಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನಾಗಮಂಗಲದಲ್ಲಿ ಗಣೇಶ ಹಬ್ಬದ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿ ಗಲಭೆಗೆ ಕಾರಣರಾಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ನಿನ್ನೆ ಮಂಗಳೂರಿನಲ್ಲಿ ವಿಎಚ್ ಪಿ ಸಂಘಟನೆ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆ ವೇಳೆ ಶರಣ್ ಪಂಪ್ ವೆಲ್ ಈದ್ ಮಿಲಾದ್ ಮೆರವಣಿಗೆ ವೇಳೆ ನಾವು ದಾಳಿ ಮಾಡಿದರೆ ಹೇಗಿರುತ್ತದೆ ಎಂದು ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

ವಿಎಚ್ ಪಿ ಧರಣಿ ವೇಳೆ ಮಾತನಾಡಿದ ಶರಣ್ ಪಂಪ್ ವೆಲ್ ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂದೂಗಳೆಲ್ಲಾ ಒಟ್ಟಾಗಿ ದಾಳಿ ಮಾಡಿದರೆ ಏನಾಗಬಹುದು ಎಂದು ಊಹೆ ಇದೆಯಾ ಎಂದಿದ್ದಾರೆ. ಹೀಗಾಗಿ ನಿನ್ನೆಯ ದಾಳಿಕೋರರಿಗೆ ಎಚ್ಚರಿಕೆ ಸಂದೇಶ ಕೊಡುತ್ತಿದ್ದೇವೆ. ಸರ್ಕಾರ ಈದ್ ಕಾರ್ಯಕ್ರಮಕ್ಕೂ ಅನುಮತಿ ನೀಡಬಾರದು. ಈದ್ ನೆಪದಲ್ಲೂ ದಾಳಿಯಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮಂಡ್ಯ ಗಲಭೆಯಲ್ಲಿ ಪಿಎಸ್ಐ ಕೈವಾಡದ ಶಂಕೆಯಿದೆ. ರಾಜ್ಯ ಸರ್ಕಾರಕ್ಕೆ ನಮ್ಮ ಮೆರವಣಿಗೆಗೆ ಭದ್ರತೆ ಒದಗಿಸಲು ಸಾಧ್ಯವಿಲ್ಲದಿದ್ದರೆ ಹೇಳಲಿ. ನಾವು ಕೇಂದ್ರದಿಂದ ಮಿಲಿಟರಿ ಕರೆಸುತ್ತೇವೆ. ಈದ್ ಮಿಲಾದ್ ಗೆ ರಾಜ್ಯ ಸರ್ಕಾರ ಒಪ್ಪಿಗೆ ಕೊಡಬಾರದು. ಕೊಟ್ಟರೆ ಆಗುವ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಹೊಣೆ ಆಗಬೇಕಾಗುತ್ತದೆ ಎಂದು ಪ್ರಚೋದನಕಾರೀ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments