Webdunia - Bharat's app for daily news and videos

Install App

ಮುಸ್ಲಿಂ ಯುವಕನಿಂದ 24 ತುಂಡು ಮಾಡುವುದಾಗಿ ಬೆದರಿಕೆ: ಮನನೊಂದು ಆತ್ಮಹತ್ಯೆ ಮಾಡಿಕೊಂಡ ಹಿಂದೂ ಯುವತಿ

Krishnaveni K
ಶುಕ್ರವಾರ, 25 ಅಕ್ಟೋಬರ್ 2024 (12:19 IST)
ಮಂಗಳೂರು: ಅನ್ಯಕೋಮಿನ ಯುವಕನಿಂದ ಪ್ರೀತಿಸದೇ ಇದ್ದರೆ 24 ತುಂಡು ಮಾಡುವುದಾಗಿ ನಿರಂತರ ಬೆದರಿಕೆಯಿಂದ ಬೇಸತ್ತ ಯುವತಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನ ಮಂಗಳೂರಿನಲ್ಲಿ ನಡೆದಿದೆ.

ಯುವತಿಯ ಸಹೋದರನಿಗೆ ಅನ್ಯಕೋಮಿನ ಯುವಕ ಬೆದರಿಕೆ ಸಂದೇಶ ಕಳುಹಿಸಿದ್ದ. ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು. ಇಲ್ಲದೇ ಹೋದರೆ ಆಕೆಯನ್ನು 24 ತುಂಡು ಮಾಡುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದ. ಯುವತಿಯ ಫೇಸ್ ಬುಕ್ ಖಾತೆ ಹ್ಯಾಕ್ ಮಾಡಿದ್ದ ವ್ಯಕ್ತಿ ಆಕೆಯ ಅಣ್ಣನಿಗೆ ಬೆದರಿಕೆ ಸಂದೇಶ ಕಳುಹಿಸಿದ್ದ. ಮುಸ್ಲಿಂ ಸಮುದಾಯದ ಆರೋಪಿ ಸುರತ್ಕಲ್ ನವನಾಗಿದ್ದ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು.

ಅದರಂತೆ ಸುರತ್ಕಲ್ ಪೊಲೀಸರು ಶಾರಿಕ್ ಎಂಬಾತನನ್ನು ಕರೆಸಿ  ವಿಚಾರಣೆ ನಡೆಸಿದ್ದರು. ಆದರೆ ಸಾಕ್ಷ್ಯ ಸಿಗದ ಹಿನ್ನಲೆಯಲ್ಲಿ ಆತನನ್ನು ಬಿಟ್ಟು ಕಳುಹಿಸಿದ್ದರು. ಇದರಿಂದ ಮನನೊಂದ ಯುವತಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪೊಲೀಸರಿಂದಲೂ ನ್ಯಾಯ ಸಿಗದೇ ಇರುವುದರಿಂದ ಈ ಕೃತ್ಯಕ್ಕೆ ಮುಂದಾಗಿರುವುದಾಗಿ ಬರೆದಿದ್ದಾಳೆ.

ಒಬ್ಬ ಮುಸ್ಲಿಮನ ಕೈಯಲ್ಲಿ ಅತ್ಯಾಚಾರವಾಗಿ ಸಾಯುವ ಬದಲು ಈಗಲೇ ಸಾಯುತ್ತೇನೆ. ಶಾರಿಕ್ ಮತ್ತು ನೂರ್ಜಾನ್ ಇಬ್ಬರನ್ನೂ ಬಿಡಬಾರದು ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾಳೆ. ನೂರ್ ಜಹಾನ್ ಎಂದರೆ ಶಾರಿಕ್ ನ ತಾಯಿ. ಯುವತಿಯ ಅಂಗಡಿಯ ಮುಂದೆಯೇ ಶಾರಿಕ್ ನ ಮನೆಯಿದೆ. ಆತನ ತಾಯಿ ನೂರ್ ಜಹಾನ್ ಮತ್ತು ಯುವತಿಯ ತಾಯಿ ನಡುವೆ ಆತ್ಮೀಯತೆಯಿತ್ತು. ಒಂದು ದಿನ ನೂರ್ ಜಹಾನ್ ಯುವತಿಯ ತಾಯಿ ಮನೆಗೇ ಬಂದು ನಿಮ್ಮ ಮಗಳನ್ನು ನನ್ನ ಮಗನಿಗೆ ಮದುವೆ ಮಾಡಿಕೊಡಿ ಎಂದೂ ಕೇಳಿದ್ದರಂತೆ. ಯುವತಿಯ ಅಂಗಡಿ ಸುತ್ತ ತಿರುಗುವುದು, ಅತ್ಯಾಚಾರ ಬೆದರಿಕೆ ಹಾಕುವುದು ಮಾಡುತ್ತಿದ್ದ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments