Select Your Language

Notifications

webdunia
webdunia
webdunia
webdunia

ಬಿಜೆಪಿ ಸಂಸದ ನಳಿನ್‌ಕುಮಾರ್ ಬಂಧನ, ಪರಿಸ್ಥಿತಿ ಉದ್ವಿಗ್ನ

ಬಿಜೆಪಿ ಸಂಸದ ನಳಿನ್‌ಕುಮಾರ್ ಬಂಧನ, ಪರಿಸ್ಥಿತಿ ಉದ್ವಿಗ್ನ
ಮಂಗಳೂರು , ಶುಕ್ರವಾರ, 7 ಜುಲೈ 2017 (13:10 IST)
ಆರೆಸ್ಸೆಸ್ ಕಾರ್ಯಕರ್ತನ ಹತ್ಯಾಯತ್ನ ವಿರೋಧಿಸಿ ಹಿಂದು ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
 
ಬಿ.ಸಿ.ರೋಡ್‌ನಲ್ಲಿ ನಿಷೇಧಾಜ್ಞೆಯ ನಡುವೆಯ ಪ್ರತಿಭಟನೆ ಮುಂದುವರಿಸಿದ್ದರಿಂದ ಬಿಜೆಪಿ ಸಂಸದ ನಳಿನ್ ಕುಮಾರ್‌ರನ್ನು ಪೊಲೀಸರು ಬಂಧಿಸಿದ್ದರಿಂದ ಪರಿಸ್ಥಿತಿ ಉದ್ವಿಗ್ನ ಹಂತಕ್ಕೆ ತಲುಪಿದೆ. ಪ್ರತಿಭಟನೆ ಯಾವುದೇ ಕ್ಷಣದಲ್ಲಾದರೂ ಹಿಂಸಾಚಾರಕ್ಕೆ ತಿರುಗುವ ಲಕ್ಷಣಗಳು ಕಂಡುಬರುತ್ತಿವೆ.
 
ಪ್ರತಿಭಟನಾಕಾರರು ಪೊಲೀಸರೊಂದಿಗೆ ಜಟಾಪಟಿ ನಡೆಸಿ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
 
ಪ್ರತಿಭಟನೆಯಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್, ಸಂಸದೆ ಶೋಭಾ ಕರಂದ್ಲಾಜೆ, ಸಂಸದ ನಳಿನ್ ಕುಮಾರ್ ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಬಿಐ ದಾಳಿ ರಾಜಕೀಯ ಷಡ್ಯಂತ್ರ: ಲಾಲು ಯಾದವ್ ಆಕ್ರೋಶ