Webdunia - Bharat's app for daily news and videos

Install App

ಕರಾವಳಿಯಲ್ಲಿ ಹಿಂದೂ ಟಾಸ್ಕ್ ಫೋರ್ಸ್ ಆರಂಭ?

Webdunia
ಸೋಮವಾರ, 25 ಜೂನ್ 2018 (17:16 IST)
ಕಡಲು ತೀರದ ಪ್ರದೇಶದಲ್ಲಿ ಸದ್ದಿಲ್ಲದೇ ಹಿಂದೂ ಟಾಸ್ಕ್ ಫೋರ್ಸ್ ಆರಂಭಗೊಳ್ಳುತ್ತಿದೆಯೇ ಎನ್ನುವ ಅನುಮಾನ ಜನರನ್ನು ಕಾಡಲಾರಂಭಿಸಿದೆ.

ಫೈರ್ ಬ್ರಾಂಡ್ ಖ್ಯಾತಿಯ ಸ್ವಾಮೀಜಿಯೊಬ್ಬರ ನೇತೃತ್ವದಲ್ಲಿ ಟಾಸ್ಕ ಫೋರ್ಸ್ ಅಸ್ತಿತ್ವಕ್ಕೆ ಬರಲಿದೆ ಎಂಬ ಸುದ್ದಿ ಬಲವಾಗಿ ಹರಡುತ್ತಿದೆ. ಲವ್ ಜಿಹಾದ್ ಮತ್ತು ಮತಾಂತರ ತಡೆಗಟ್ಟಲು ಹಿಂದೂ ಟಾಸ್ಕ್ ಫೋರ್ಸ್ ಆರಂಭಗೊಳ್ಳಲಿದೆ ಎನ್ನಲಾಗಿದ್ದು, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಇದರ ನೇತೃತ್ವ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಹಿಂದುತ್ವವನ್ನು ಯಾರು ಗೌರವಿಸುತ್ತಾರೆಯೋ ಅವರನ್ನು ನಾವು ಗೌರವಿಸುತ್ತೇವೆ ಎನ್ನುವ ಧ್ಯೇಯದೊಂದಿಗೆ ಅಸ್ತಿತ್ವಕ್ಕೆ ಬರಲಿದೆ. ಈ ಕುರಿತು ಅಧಿಕೃತ ಅಂತರ್ಜಾಲ ತಾಣದ ಮೂಲಕ ಟಾಸ್ಕ ಫೋರ್ಸ್ ಮಾಹಿತಿಯನ್ನು ಹರಿಬಿಟ್ಟಿದೆ. ಹಿಂದುತ್ವದ ಅವಹೇಳನದ ವಿರುದ್ಧ ಹೋರಾಟ, ಧರ್ಮ ಜಾಗೃತಿ ಕಾರ್ಯದ ಬಗ್ಗೆ ಮಾಹಿತಿ ನೀಡುವ ಕೆಲಸವನ್ನೂ ಮಾಡಲಿದೆ.

ಈ ಟಾಸ್ಕ ಫೋರ್ಸ್ ದೇಶದ 29 ರಾಜ್ಯಗಳಲ್ಲಿಯೂ ಕ್ರಮೇಣ ವಿಸ್ತರಣೆ ಆಗಲಿದೆ. ಅಂದಹಾಗೆ ತ್ರಿಶೂಲ ಚಿನ್ಹೆಯೊಂದಿಗೆ ಫೀಲ್ಡಿಗೆ ಇಳಿಯಲು ಹಿಂದೂ ಟಾಸ್ಕ್ ಫೋರ್ಸ್ ಸಜ್ಜಾಗಿದ್ದು, ಈ ಕುರಿತು ಮಂಗಳೂರಿನ ವಜ್ರದೇಹಿ ಮಠದಲ್ಲಿ ಕಾನೂನು ತಜ್ಞರ ಸಮ್ಮುಖದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments