ಹಿಂದು ಜಾಗರಣ ವೇದಿಕೆ ಕಾರ್ಯಾಚರಣೆ: ಗೋಮಾಂಸ ಸಮೇತ ಆರೋಪಿ ಬಂಧನ

Webdunia
ಸೋಮವಾರ, 14 ಫೆಬ್ರವರಿ 2022 (21:03 IST)
ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕುಂಬೂರು ಎ.ಜೆ.ಎಸ್ಟೇಟ್ ನಲ್ಲಿ  ಭಾನುವಾರ ರಾತ್ರಿ 8:30 ರ ಸುಮಾರಿಗೆ  ಎ.ಜೆ ಎಸ್ಟೇಟ್ ನ  ಕೆಲವರ ಸಹಕಾರದೊಂದಿಗೆ ಅಸ್ಸಾಂ ಮೂಲದ ಕಾರ್ಮಿಕರು ಗೋವನ್ನು ಹತ್ಯೆಗೈದು ಮಾಂಸ ಮಾಡಿ ಅಕ್ರಮವಾಗಿ  ಸಾಗಾಟ ಮಾಡುತ್ತಿದ್ದ ಸಂದರ್ಭ ಕಾರ್ಯಾಚರಣೆ ನಡೆಸಿದ ಹಿಂದು ಜಾಗರಣ ವೇದಿಕೆ ಹಾಗೂ ಸ್ಥಳೀಯ ಹಿಂದು ಕಾರ್ಯಕರ್ತರ ತಂಡ ಗೋಮಾಂಸ ಸಮೇತ ಅಸ್ಸಾಂ ಮೂಲದ ವ್ಯಕ್ತಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿರುತ್ತಾರೆ. 
 ಅಸ್ಸಾಂ ಮೂಲದ ವ್ಯಕ್ತಿ ರಜಾಕ್ ಎಂಬಾತನನ್ನು ಕಾರ್ಯಕರ್ತರು ಪೋಲೀಸರಿಗೊಪ್ಪಿಸಿದ್ದು ಬಂಧಿತ ಆರೋಪಿ ರಜಾಕ್  ಜೊತೆಯಲ್ಲಿದ್ದ ಇನ್ನೂ ಐದಾರು ಕಾರ್ಮಿಕರು ಕತ್ತಲಲ್ಲಿ ಓಡಿ ತಪ್ಪಿಸಿಕೊಂಡಿರುತ್ತಾರೆ. ತಕ್ಷಣವೇ ಪೋಲೀಸರಿಗೆ ಮಾಹಿತಿ ನೀಡಲಾಗಿದ್ದು ಇನ್ನುಳಿದ ಆರೋಪಿಗಳ ಬಂಧನಕ್ಕೆ ಪೋಲೀಸರು ಬಲೆ ಬೀಸಿದ್ದಾರೆ.  
ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಗೋಹತ್ಯೆ, ಗೋಮಾಂಸ  ಮಾರಾಟ , ಅಕ್ರಮ ಗೋಸಾಗಾಟದಂತಹ ಪ್ರಕರಣಗಳು ನಡೆಯುತ್ತಲೇ ಇದ್ದು ಪೋಲೀಸ್ ಇಲಾಖೆ  ಅವುಗಳನ್ನು ಮಟ್ಟ ಹಾಕುವಲ್ಲಿ ಸಂಪೂರ್ಣ ವಿಫಲವಾಗಿದೆಯೆಂದು ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು  ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 ಕಾರ್ಯಾಚರಣೆ ಸಂದರ್ಭ ಹಿಂದು ಜಾಗರಣ ವೇದಿಕೆಯ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾದ  ಮಾದಪುರ ಸುನಿಲ್ ,ಕಾರ್ಯದರ್ಶಿ ವಿನು,ಜಿಲ್ಲಾ ಸಹ ಸಂಪರ್ಕ ಪ್ರಮುಖ್ ಉಮೇಶ್ , ಹೋಸತೋಟ ಪ್ರಭ,ಯೋಗಾನಂದ ಕುಂಬೂರು,ಗಿರೀಶ್ , ದೀಪು...ಸೇರಿದಂತೆ  ಸ್ಥಳೀಯ ಕಾರ್ಯಕರ್ತರು ಹಾಜರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments