ಹಿಂದೂ ಯುವತಿ ಬರ್ಬರ ಹತ್ಯೆ, ಮುಸ್ಲಿಂ ಯುವನ ಬಂಧನ: ಕಿಚ್ಚುಹಚ್ಚಿದ ಜಸ್ಟೀಸ್ ಫಾರ್ ಸ್ವಾತಿ ಅಭಿಯಾನ

Sampriya
ಶುಕ್ರವಾರ, 14 ಮಾರ್ಚ್ 2025 (14:50 IST)
Photo Courtesy X
ಹಾವೇರಿ: ರಾಣೇಬೆನ್ನೂರು ತಾಲೂಕಿನ ಪತ್ತೇಪುರ ಗ್ರಾಮದ ತುಂಗಭದ್ರಾ ನದಿ ಬಳಿ ಮಾರ್ಚ್‌ 6ರಂದು ಯುವತಿಯ ಮೃತದೇಹ ಪತ್ತೆಯಾಗಿತ್ತು. ಮೊದಲು ಅಪರಿಚಿತ ಯುವತಿಯ ಶವ ಎಂದು ಹಲಗೇರಿ ಪೊಲೀಸರು ಘೋಷಿಸಿದ್ದರು. ಇದೀಗ  ಈ ಪ್ರಕರಣ ದೊಡ್ಡ ತಿರುವು ಪಡೆದಿದೆ.

ರಾಣೆಬೆನ್ನೂರಿನ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಹಿಂದೂ ಯುವತಿಯ ಶವ ಇದಾಗಿದ್ದು, ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿ ಎಸೆದಿರುವುದು ಪೊಲೀಸ್‌ ತನಿಖೆಯಿಂದ ಬರಲಾಗಿದೆ. ಈ ಸಂಬಂಧ ಮುಸ್ಲಿಂ ಯುವಕ ನಯಾಜ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ರಮೇಶ್ ಬ್ಯಾಡಗಿ (22) ಮೃತ ಯುವತಿ. ಮಾ.6 ರಂದು ಆಕೆಯ ಶವ ನದಿ ಬಳಿ ಪತ್ತೆಯಾಗಿತ್ತು. ಗುರುತು ಪತ್ತೆಯಾಗದ ಕಾರಣ ವಾರಸುದಾರರು ಯಾರೂ ಇಲ್ಲದೆ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಹೂತು ಹಾಕಲಾಗಿತ್ತು. ಮರಣೋತ್ತರ ಪರೀಕ್ಷೆ ವೇಳೆ ಆಕೆಯನ್ನು ಹತ್ಯೆಯಾಗಿರುವುದು ದೃಢಪಟ್ಟಿದೆ.

ನಂತರದಲ್ಲಿ ಹಲಗೇರಿ ಪೊಲೀಸರು ತನಿಖೆ ಚುರುಕುಗೊಳಿಸಿದರು. ಮಾರ್ಚ್‌ 3 ರಂದು ಕಾಣೆಯಾಗಿದ್ದ ಸ್ವಾತಿಯ ಗುರುತನ್ನು ಪತ್ತೆಹಚ್ಚಿದ್ದರು. ಸ್ವಾತಿ ಪೋಷಕರು ಹಿರೇಕೇರೂರು ಪೊಲೀಸ್ ಠಾಣೆಯಲ್ಲಿ ಆಕೆ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದರು.

ಸ್ವಾತಿ ತಂದೆ ಮೃತಪಟ್ಟಿದ್ದು, ತಾಯಿ ಜೊತೆ ವಾಸವಿದ್ದರು. ಯುವತಿ ಸಾವಿನ ಸಂಬಂಧ ಮೂವರ ಮೇಲೆ ಶಂಕೆ ವ್ಯಕ್ತವಾಗಿದ್ದು, ತನಿಖೆಯನ್ನು ಹಲಗೇರಿ ಪೊಲೀಸರು ತೀವ್ರಗೊಳಿಸಿದ್ದಾರೆ. ಹಿಂದೂ ಸಂಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಜಸ್ಟೀಸ್ ಫಾರ್ ಸ್ವಾತಿ ಅಭಿಯಾನ ಆರಂಭಿಸಿದ್ದು, ಹಂತಕರನ್ನು ಪತ್ತೆ ಹಚ್ಚಿ, ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಗಮನಿಸಿ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮುಂದಿನ ಸುದ್ದಿ
Show comments