ಮೈಸೂರು ಕಾಲೇಜಿನಲ್ಲಿ ಗಾಯಕ ಶ್ರೀಹರ್ಷ ಕಾರ್ಯಕ್ರಮದ ವೇಳೆ ರಾಮನ ಹಾಡು ಹಾಡಿದ್ದಕ್ಕೆ ಹಿಂದೂ ಯುವಕನಿಗೆ ಥಳಿತ

Krishnaveni K
ಶುಕ್ರವಾರ, 10 ಮೇ 2024 (09:56 IST)
Photo Courtesy: Instagram
ಮೈಸೂರು: ಮೈಸೂರಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಸರಿಗಮಪ ಖ್ಯಾತಿಯ ಗಾಯಕ ಶ್ರೀಹರ್ಷ ಗಾಯನ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಗಳಿಂದ ದಾಂಧಲೆ ನಡೆದಿದೆ. ಈ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ.

ಗಾಯಕ ಶ್ರೀಹರ್ಷ ಮೈಸೂರಿನ ಸಂತ ಫಿಲೋಮಿನಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಹಾಡುತ್ತಿದ್ದರು. ಈ ವೇಳೆ ಅವರು ಜಯತು ಜಯತು ಶ್ರೀರಾಮ ಹಾಡು ಹಾಡಿದ್ದಾರೆ. ಇದಕ್ಕೆ ಹಿಂದೂ ಯುವಕನೊಬ್ಬ ಧ್ವನಿಗೂಡಿಸಿದ್ದಾನೆ. ಆತನನ್ನು ಮುಸ್ಲಿಂ ಯುವಕರ ಗುಂಪು ಸುತ್ತುವರಿದು ಥಳಿಸಿದೆ. ಜೊತೆಗೆ ಈ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಈ ವಿಡಿಯೋ ಸಂಸದ ಪ್ರತಾಪ್ ಸಿಂಹ ಗಮನಕ್ಕೆ ಬಂದಿದ್ದು, ವಿಡಿಯೋ ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ‘ನಿನ್ನೆ ಗಾಯಕ ಶ್ರೀಹರ್ಷ ಜಯತು ಜಯತು ಶ್ರೀರಾಮ ಹಾಡು ಹಾಡಿದಾಗ ಕಾರ್ಯಕ್ರಮ ಹಾಳು ಮಾಡಿದ್ದಲ್ಲದೆ, ಹಿಂದೂ ಯುವಕನನ್ನು ಥಳಿಸಲಾಗಿದೆ. ಇದನ್ನೆಲ್ಲಾ ನೋಡಿಯೂ ಕೈಕಟ್ಟಿ ಕುಳಿತುಕೊಳ್ಳಬೇಕಾ?’ ಎಂದು ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೀಗ ಘಟನೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕೆಲವು ದಿನಗಳ ಮೊದಲು ಮೋದಿ ಬಗ್ಗೆ ಹಾಡು ಮಾಡಿದ್ದ ವ್ಯಕ್ತಿಯ ಮೇಲೆ ಅನ್ಯಕೋಮಿನ ವ್ಯಕ್ತಿಗಳಿಂದ ಹಲ್ಲೆ ನಡೆದಿತ್ತು. ಇದೀಗ ಮೈಸೂರಿನಲ್ಲಿ ಮತ್ತೊಂದು ಅಂತಹದ್ದೇ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments