Webdunia - Bharat's app for daily news and videos

Install App

ಸಿದ್ಧರಾಮಯ್ಯ, ಡಿಕೆಶಿ ಸರಕಾರದಲ್ಲಿ ಹಿಂದೂಗಳಿಗೆ ರಕ್ಷಣೆಯಿಲ್ಲ: ಬಸನಗೌಡ ಪಾಟೀಲ್

Sampriya
ಶನಿವಾರ, 27 ಏಪ್ರಿಲ್ 2024 (14:20 IST)
Photo Courtesy X
ಕುಂದಗೋಳ: ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನವೇ ಭಯೋತ್ಪಾದಕರು ಹಾಗೂ ಮತಾಂಧ ಸಂಘಟನೆಯವರ ಮನೆಗಳನ್ನು ಕೆಡವಲು 20 ಸಾವಿರ ಬುಲ್ಡೋಜರ್‌ ಖರೀದಿಗೆ ಅನುಮತಿ ನೀಡುವೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪರ ಬೃಹತ್ ರೋಡ್ ಶೋ ನಂತರ ಮಾತನಾಡಿದ ಅವರು, ಭಾರತವನ್ನು ಪಾಕಿಸ್ತಾನ ಮಾಡಲು ಹೊರಟಿರುವ ಕಾಂಗ್ರೆಸ್‌ ಪಕ್ಷದಿಂದ ಮುಂಬರುವ ದಿನಗಳು ದುಬಾರಿಯಾಗಲಿವೆ. ತಾವು ಹಾಕುವ ಒಂದು ಮತವೂ ಒಬ್ಬ ಭಯೋತ್ಪಾದಕನನ್ನು ಸಂಹಾರ ಮಾಡಲಿದೆ ಎಂದರು.

ರಾಜ್ಯದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ ನೇತೃತ್ವದ ಸರಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ. ಈಚೆಗೆ ಹುಬ್ಬಳ್ಳಿಯಲ್ಲಿ ತನ್ನ ಸ್ನೇಹಿತನಿಂದಲೇ ಹತ್ಯೆಗೀಡಾದ ನೇಹಾ ಪ್ರಕರಣವನ್ನು ಗೃಹ ಸಚಿವರು, ಮುಖ್ಯಮಂತ್ರಿಗಳು ಅತ್ಯಂತ ಹಗುರವಾಗಿ ಸ್ವೀಕರಿಸಿದ್ದಾರೆ. ಕೇವಲ ಮುಸ್ಲಿಂ ತುಷ್ಠೀಕರಣ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್‌ ಭಾರತವನ್ನು ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಭಾರತದಲ್ಲಿ ಪಾಕ್ ಧ್ವಜ ಹಾರಾಡುತ್ತದೆ.  ಅಪರಾಧ ಹಾಗೂ ಭಯೋತ್ಪಾದಕ ಚಟುವಟಿಕೆಗಳು ಜಾಸ್ತಿಯಾಗುತ್ತಿದ್ದು ನಾವೆಲ್ಲ ಎಚ್ಚೆತ್ತುಕೊಂಡು ಮತ ಚಲಾವಣೆ ಮಾಡಬೇಕೆಂದರು.

ಇನ್ನೂ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ನಮ್ಮ ದೇಶ ತುಂಬಾನೇ ಮುಂದುವರೆಯುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments