Webdunia - Bharat's app for daily news and videos

Install App

ಸಿದ್ಧರಾಮಯ್ಯ, ಡಿಕೆಶಿ ಸರಕಾರದಲ್ಲಿ ಹಿಂದೂಗಳಿಗೆ ರಕ್ಷಣೆಯಿಲ್ಲ: ಬಸನಗೌಡ ಪಾಟೀಲ್

Sampriya
ಶನಿವಾರ, 27 ಏಪ್ರಿಲ್ 2024 (14:20 IST)
Photo Courtesy X
ಕುಂದಗೋಳ: ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನವೇ ಭಯೋತ್ಪಾದಕರು ಹಾಗೂ ಮತಾಂಧ ಸಂಘಟನೆಯವರ ಮನೆಗಳನ್ನು ಕೆಡವಲು 20 ಸಾವಿರ ಬುಲ್ಡೋಜರ್‌ ಖರೀದಿಗೆ ಅನುಮತಿ ನೀಡುವೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪರ ಬೃಹತ್ ರೋಡ್ ಶೋ ನಂತರ ಮಾತನಾಡಿದ ಅವರು, ಭಾರತವನ್ನು ಪಾಕಿಸ್ತಾನ ಮಾಡಲು ಹೊರಟಿರುವ ಕಾಂಗ್ರೆಸ್‌ ಪಕ್ಷದಿಂದ ಮುಂಬರುವ ದಿನಗಳು ದುಬಾರಿಯಾಗಲಿವೆ. ತಾವು ಹಾಕುವ ಒಂದು ಮತವೂ ಒಬ್ಬ ಭಯೋತ್ಪಾದಕನನ್ನು ಸಂಹಾರ ಮಾಡಲಿದೆ ಎಂದರು.

ರಾಜ್ಯದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ ನೇತೃತ್ವದ ಸರಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ. ಈಚೆಗೆ ಹುಬ್ಬಳ್ಳಿಯಲ್ಲಿ ತನ್ನ ಸ್ನೇಹಿತನಿಂದಲೇ ಹತ್ಯೆಗೀಡಾದ ನೇಹಾ ಪ್ರಕರಣವನ್ನು ಗೃಹ ಸಚಿವರು, ಮುಖ್ಯಮಂತ್ರಿಗಳು ಅತ್ಯಂತ ಹಗುರವಾಗಿ ಸ್ವೀಕರಿಸಿದ್ದಾರೆ. ಕೇವಲ ಮುಸ್ಲಿಂ ತುಷ್ಠೀಕರಣ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್‌ ಭಾರತವನ್ನು ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಭಾರತದಲ್ಲಿ ಪಾಕ್ ಧ್ವಜ ಹಾರಾಡುತ್ತದೆ.  ಅಪರಾಧ ಹಾಗೂ ಭಯೋತ್ಪಾದಕ ಚಟುವಟಿಕೆಗಳು ಜಾಸ್ತಿಯಾಗುತ್ತಿದ್ದು ನಾವೆಲ್ಲ ಎಚ್ಚೆತ್ತುಕೊಂಡು ಮತ ಚಲಾವಣೆ ಮಾಡಬೇಕೆಂದರು.

ಇನ್ನೂ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ನಮ್ಮ ದೇಶ ತುಂಬಾನೇ ಮುಂದುವರೆಯುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments