Webdunia - Bharat's app for daily news and videos

Install App

ಹಿಂದೂಗಳ ಮನೆ ಮೇಲೆ ಅನ್ಯಕೋಮಿನವರಿಂದ ಕಲ್ಲು ಎಸೆತ ಆರೋಪ

Krishnaveni K
ಶನಿವಾರ, 15 ಫೆಬ್ರವರಿ 2025 (14:05 IST)
ಚಿಕ್ಕಮಗಳೂರು: ಹಿಂದೂಗಳ ಮನೆ ಮೇಲೆ ಅನ್ಯಕೋಮಿನವರು ಕಲ್ಲು ಎಸೆದು ಹಾನಿ ಮಾಡಿದ್ದಾರೆ ಎಂಬ ಆರೋಪ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಕೇಳಿಬಂದಿದೆ.

ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿರುವ ಕೆಲವು ಹಿಂದೂಗಳ ಮನೆ ಕಿಟಿಕಿ ಗಾಜುಗಳನ್ನು ಕಲ್ಲು ಎಸೆದು ಧ್ವಂಸ ಮಾಡಲಾಗಿದೆ. ಶುಕ್ರವಾರದ ಪ್ರಾರ್ಥನೆ ಮುಗಿಸಿ ತೆರಳುವಾಗ ಅನ್ಯಕೋಮಿನವರು ಈ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಕಲ್ಲು ತೂರಾಟ ನಡೆಸಿದ್ದಲ್ಲದೆ, ಘೋಷಣೆಗಳನ್ನೂ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಮನೆ ಹಾನಿಗೀಡಾಗಿರುವ ಮಾಲಿಕ ಮಹೇಶ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿ ಕೃತ್ಯವೆಸಗಿದ ಕಿಡಿಗೇಡಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments