Webdunia - Bharat's app for daily news and videos

Install App

ಶಿವರಾತ್ರಿ ಜಾಗರಣೆ ಮಾಡಿದ್ದಕ್ಕೆ ರಜೆ ಕೊಡಿ ಎಂದು ಸಿದ್ದರಾಮಯ್ಯಗೆ ಬೇಡಿಕೆಯಿಟ್ಟ ಹಿಂದೂಗಳು

Krishnaveni K
ಮಂಗಳವಾರ, 25 ಫೆಬ್ರವರಿ 2025 (15:49 IST)
ಬೆಂಗಳೂರು: ಮೊನ್ನೆಯಷ್ಟೇ ರಂಝಾನ್ ಹಬ್ಬದ ಸಂದರ್ಭದಲ್ಲಿ ಮುಸ್ಲಿಂ ಸರ್ಕಾರೀ ನೌಕರರಿಗೆ ಒಂದು ಗಂಟೆ ಕೆಲಸದಿಂದ ವಿನಾಯ್ತಿ ನೀಡಿ ಎಂದು ಮನವಿ ಮಾಡಲಾಗಿತ್ತು. ಈಗ ಹಿಂದೂ ಮುಖಂಡರು ಶಿವರಾತ್ರಿಗೆ ಜಾಗರಣೆ ಮಾಡಿದ್ದಕ್ಕೆ ಮರುದಿನ ಕೆಲಸಕ್ಕೆ ರಜೆ ನೀಡಿ ಎಂದು ಮನವಿ ಮಾಡಿದ್ದಾರೆ.

ನಾಳೆ ಶಿವರಾತ್ರಿ ಹಬ್ಬವಾಗಿದೆ. ಹಲವರು ದೇವಾಲಯಗಳಿಗೆ ತೆರಳಿ ರಾತ್ರಿಯಿಡೀ ಭಜನೆ, ಪೂಜೆಯಲ್ಲಿ ಕಾಲ ಕಳೆಯುತ್ತಾರೆ. ಹೀಗಾಗಿ ಮರುದಿನ ಮತ್ತೆ ಕಚೇರಿಗೆ ತೆರಳಲು ಕಷ್ಟ. ಹೀಗಾಗಿ ಮರುದಿನ ಸರ್ಕಾರೀ ಉದ್ಯೋಗಿಗಳಿಗೆ ರಜೆ ಕೊಡಿ ಎಂದು ಕೆಲವು ಹಿಂದೂ ಮುಖಂಡರು ಸಿಎಂಗೆ ಮನವಿ ಮಾಡಿದ್ದಾರೆ.

ಶಿವರಾತ್ರಿ ಹಬ್ಬಕ್ಕೆ ಸರ್ಕಾರೀ ರಜೆಯಿಲ್ಲ. ಹಾಗಿದ್ದರೂ ಕೆಲವು ಸಂಸ್ಥೆಗಳು ಮಾತ್ರ ಸ್ವಯಂಪ್ರೇರಿತವಾಗಿ ರಜೆ ನೀಡುತ್ತವೆ. ಕೆಲವರು ರಜೆ ಹಾಕಿಯಾದರೂ ರಾತ್ರಿಯಿಡೀ ಪೂಜೆಯಲ್ಲಿ ಪಾಲ್ಗೊಳ್ಳುತ್ತಾರೆ.

ಹೀಗಾಗಿ ಮರುದಿನ ಸರ್ಕಾರೀ ನೌಕರರಿಗೆ ರಜೆ ನೀಡಿ ಎಂದು ಸಿಎಂ ಸಿದ್ದರಾಮಯ್ಯಗೆ ಕೆಲವರು ಮುಖಂಡರು ಮನವಿ ಮಾಡಿದ್ದಾರೆ. ಶೀಘ್ರವೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments