Webdunia - Bharat's app for daily news and videos

Install App

ಸಿಎಂ ಹೆಚ್.ಡಿ.ಕೆ ವಿರುದ್ಧ ಹಿರೇಮಠ ಆಕ್ರೋಶ

Webdunia
ಗುರುವಾರ, 11 ಅಕ್ಟೋಬರ್ 2018 (17:10 IST)
ಜೆಡಿಎಸ್​ ಎಜೆಂಟರಂತೆ ವರ್ತಿಸುತ್ತಾರೆ ಎಂಬ ಆರೋಪ ಹೊತ್ತಿರುವ ಸಮಾಜ ಪರಿವರ್ತನಾ ಸಮುದಾಯದ ಮುಖಂಡ ಎಸ್​.ಆರ್​.ಹಿರೇಮಠ ಅವರು, ಸಿಎಂ ಕುಮಾರಸ್ವಾಮಿ ವಿರುದ್ಧ ಗುಡುಗಿದ್ದಾರೆ.

ಹುಬ್ಬಳ್ಳಿ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಮುಖವಾಗಿ ಜಂತಕಲ್ ಮೈನಿಂಗ್ ಹಗರಣದ ಕುರಿತಾಗಿ ಮಾತನಾಡಿದ್ದಾರೆ. ಈ ಹಗರಣದಲ್ಲಿ ಮೂರು ಪಕ್ಷಗಳ ಜೆಸಿಬಿಗಳು ಭಾಗಿಯಾಗಿವೆ. ಇದೇ ಹಗರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ​, ಜನಾರ್ದನ ರೆಡ್ಡಿ ಹಾಗೂ ಕರುಣಾಕರ ರೆಡ್ಡಿ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಸಿಎಂ ಕುಮಾರಸ್ವಾಮಿ ಕೂಡಾ ರಾಜೀನಾಮೆ ಕೊಡಬೇಕಾಗುತ್ತದೆ. ಮಾಡಿದ್ದುಣ್ಣೋ ಮಾರಾಯ ಅನ್ನೋ ಗಾದೆಯಂತೆ ಸಿಎಂ ರಾಜೀನಾಮೆ ನೀಡಬೇಕಾದ ಸನ್ನಿವೇಶ ನಿರ್ಮಾಣವಾಗಲಿದೆ ಎಂದು ಹಿರೇಮಠ ಭವಿಷ್ಯ ನುಡಿದರು.

ಹಗರಣದಲ್ಲಿ ಸಿಎಂ ಹೆಚ್​ಡಿಕೆ ಮೇಲಿದ್ದ ಆರೋಪ
ಜಂತಕಲ್ ಎಂಟರ್ ಪ್ರೈಸಸ್​ಗೆ ಗಣಿ ಪರವಾನಗಿ ನವೀಕರಣದಲ್ಲಿ ಅವ್ಯವಹಾರ ಎಸಗಿದ್ದಾರೆ ಎಂಬ ಆರೋಪ ಕುಮಾರಸ್ವಾಮಿ ಮೇಲಿತ್ತು. ಇದರ ವಿಚಾರಣೆಯ ಜವಾಬ್ದಾರಿಯನ್ನು ಎಸ್​​ಐಟಿಗೆ ವಹಿಸಲಾಗಿತ್ತು. ಅಲ್ಲದೇ ಎಸ್​​ಐಟಿಯಿಂದ ತನಿಖಾ ವರದಿ ಸುಪ್ರೀಂ ಕೋರ್ಟ್​ಗೆ ಸಲ್ಲಿಕೆ ಆಗುವವರೆಗೂ ಎಸ್​ಐಟಿ ತನಿಖೆಗೆ ಸಹಕರಿಸಬೇಕೆಂಬ ಹೈಕೋರ್ಟ್​ ನಿರ್ದೇಶನವೂ ಇತ್ತು. ಎಸ್​​ಐಟಿಯಿಂದ ವಿಚಾರಣೆ ನಡೆದಿದ್ದು, ನಿಗದಿಯಂತೆ ಜಂತಕಲ್ ಮೈನಿಂಗ್ ಪ್ರಕರಣದ ವಿಚಾರಣೆಯನ್ನ ನಾಳೆ ಸುಪ್ರೀಂಕೋರ್ಟ್​ ಕೈಗೆತ್ತಿಕೊಳ್ಳಬೇಕಿತ್ತು. ಆದ್ರೆ ಪ್ರಕರಣದ ವಿಚಾರಣೆಯನ್ನ ಸುಪ್ರೀಂ ಕೋರ್ಟ್​​​ ನವೆಂಬರ್ 14ಕ್ಕೆ ಮುಂದೂಡಿದೆ ಎಂದು ಹೇಳಿದ್ರು.

ಏನಿದು ಹಗರಣ?
ಜಂತಕಲ್‌ ಮೈನಿಂಗ್‌ ಕಂಪನಿಗೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ತಣಿಗೆಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿದ್ದ ಗಣಿಯನ್ನು (ವೇಸ್ಟ್‌ ಡಂಪ್‌) ಸಾಗಣೆ ಮಾಡಲು ‘ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ’ಯಿಂದ ಅನುಮತಿ ಸಿಕ್ಕಿರುವಂತೆ ಸೃಷ್ಟಿಸಿದ್ದ ನಕಲಿ ದಾಖಲೆ ಪತ್ರಗಳ ಹಗರಣ ಇದಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments