ಸಿಎಂ ಹೆಚ್.ಡಿ.ಕೆ ವಿರುದ್ಧ ಹಿರೇಮಠ ಆಕ್ರೋಶ

Webdunia
ಗುರುವಾರ, 11 ಅಕ್ಟೋಬರ್ 2018 (17:10 IST)
ಜೆಡಿಎಸ್​ ಎಜೆಂಟರಂತೆ ವರ್ತಿಸುತ್ತಾರೆ ಎಂಬ ಆರೋಪ ಹೊತ್ತಿರುವ ಸಮಾಜ ಪರಿವರ್ತನಾ ಸಮುದಾಯದ ಮುಖಂಡ ಎಸ್​.ಆರ್​.ಹಿರೇಮಠ ಅವರು, ಸಿಎಂ ಕುಮಾರಸ್ವಾಮಿ ವಿರುದ್ಧ ಗುಡುಗಿದ್ದಾರೆ.

ಹುಬ್ಬಳ್ಳಿ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಮುಖವಾಗಿ ಜಂತಕಲ್ ಮೈನಿಂಗ್ ಹಗರಣದ ಕುರಿತಾಗಿ ಮಾತನಾಡಿದ್ದಾರೆ. ಈ ಹಗರಣದಲ್ಲಿ ಮೂರು ಪಕ್ಷಗಳ ಜೆಸಿಬಿಗಳು ಭಾಗಿಯಾಗಿವೆ. ಇದೇ ಹಗರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ​, ಜನಾರ್ದನ ರೆಡ್ಡಿ ಹಾಗೂ ಕರುಣಾಕರ ರೆಡ್ಡಿ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಸಿಎಂ ಕುಮಾರಸ್ವಾಮಿ ಕೂಡಾ ರಾಜೀನಾಮೆ ಕೊಡಬೇಕಾಗುತ್ತದೆ. ಮಾಡಿದ್ದುಣ್ಣೋ ಮಾರಾಯ ಅನ್ನೋ ಗಾದೆಯಂತೆ ಸಿಎಂ ರಾಜೀನಾಮೆ ನೀಡಬೇಕಾದ ಸನ್ನಿವೇಶ ನಿರ್ಮಾಣವಾಗಲಿದೆ ಎಂದು ಹಿರೇಮಠ ಭವಿಷ್ಯ ನುಡಿದರು.

ಹಗರಣದಲ್ಲಿ ಸಿಎಂ ಹೆಚ್​ಡಿಕೆ ಮೇಲಿದ್ದ ಆರೋಪ
ಜಂತಕಲ್ ಎಂಟರ್ ಪ್ರೈಸಸ್​ಗೆ ಗಣಿ ಪರವಾನಗಿ ನವೀಕರಣದಲ್ಲಿ ಅವ್ಯವಹಾರ ಎಸಗಿದ್ದಾರೆ ಎಂಬ ಆರೋಪ ಕುಮಾರಸ್ವಾಮಿ ಮೇಲಿತ್ತು. ಇದರ ವಿಚಾರಣೆಯ ಜವಾಬ್ದಾರಿಯನ್ನು ಎಸ್​​ಐಟಿಗೆ ವಹಿಸಲಾಗಿತ್ತು. ಅಲ್ಲದೇ ಎಸ್​​ಐಟಿಯಿಂದ ತನಿಖಾ ವರದಿ ಸುಪ್ರೀಂ ಕೋರ್ಟ್​ಗೆ ಸಲ್ಲಿಕೆ ಆಗುವವರೆಗೂ ಎಸ್​ಐಟಿ ತನಿಖೆಗೆ ಸಹಕರಿಸಬೇಕೆಂಬ ಹೈಕೋರ್ಟ್​ ನಿರ್ದೇಶನವೂ ಇತ್ತು. ಎಸ್​​ಐಟಿಯಿಂದ ವಿಚಾರಣೆ ನಡೆದಿದ್ದು, ನಿಗದಿಯಂತೆ ಜಂತಕಲ್ ಮೈನಿಂಗ್ ಪ್ರಕರಣದ ವಿಚಾರಣೆಯನ್ನ ನಾಳೆ ಸುಪ್ರೀಂಕೋರ್ಟ್​ ಕೈಗೆತ್ತಿಕೊಳ್ಳಬೇಕಿತ್ತು. ಆದ್ರೆ ಪ್ರಕರಣದ ವಿಚಾರಣೆಯನ್ನ ಸುಪ್ರೀಂ ಕೋರ್ಟ್​​​ ನವೆಂಬರ್ 14ಕ್ಕೆ ಮುಂದೂಡಿದೆ ಎಂದು ಹೇಳಿದ್ರು.

ಏನಿದು ಹಗರಣ?
ಜಂತಕಲ್‌ ಮೈನಿಂಗ್‌ ಕಂಪನಿಗೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ತಣಿಗೆಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿದ್ದ ಗಣಿಯನ್ನು (ವೇಸ್ಟ್‌ ಡಂಪ್‌) ಸಾಗಣೆ ಮಾಡಲು ‘ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ’ಯಿಂದ ಅನುಮತಿ ಸಿಕ್ಕಿರುವಂತೆ ಸೃಷ್ಟಿಸಿದ್ದ ನಕಲಿ ದಾಖಲೆ ಪತ್ರಗಳ ಹಗರಣ ಇದಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯಿನ್ ನುಂಗಿ ಎರಡನೇ ತರಗತಿ ವಿದ್ಯಾರ್ಥಿನಿ ಸಾವು

ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಪಿತೂರಿ: ಐಎಸ್‌ಐ, ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಅರೆಸ್ಟ್‌

Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಸುಪ್ರೀಂ ಚಾಟಿ ಬೆನ್ನಲ್ಲೇ ಟ್ರಂಪ್‌ ಹೊಸ ವರಸೆ: ಭಾರತ ಸೇರಿ ಎಲ್ಲಾ ದೇಶಗಳಿಗೆ ಹೆಚ್ಚುವರಿ ಸುಂಕ ಸಮರ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

ಮುಂದಿನ ಸುದ್ದಿ
Show comments