Webdunia - Bharat's app for daily news and videos

Install App

ಐತಿಹಾಸಿಕ ವೆಸ್ಲಿ ಸೇತುವೆ ಮುಳುಗಡೆ

Webdunia
ಮಂಗಳವಾರ, 17 ಜುಲೈ 2018 (18:16 IST)
ನದಿ ನೀರಿನ ರಭಸಕ್ಕೆ ಪ್ರವಾಸಿಗರ ಕಣ್ಮನ ಸೆಳೆಯುತ್ತಿದ್ದ   200 ವರ್ಷಗಳ  ಐತಿಹಾಸಿಕ ಸೇತುವೆ, ನೋಡ ನೋಡುತ್ತಲೇ ಕಣ್ಮರೆಯಾಯಾಗಿದೆ

ಕಾವೇರಿಯ ರಭಸಕ್ಕೆ 200 ವರ್ಷಗಳ ಐತಿಹಾಸಿಕ ಸೇತುವೆ ಕೊಚ್ಚಿಹೋಗಿರುವ ಘಟನೆ ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಕೋಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತಕ್ಕೆ ಹೋಗುವ ಮುನ್ನಾ ಸಿಗುವ ಐತಿಹಾಸಿಕ ವೆಸ್ಲಿ ಸೇತುವೆ ನೀರಿನ ಸೆಳವಿಗೆ ಸಿಲುಕಿ  ಇನ್ನಿಲ್ಲದಂತಾಗಿದೆ. ಟಿಪ್ಪು ಸುಲ್ತಾನ್ ರಾಜಾಡಳಿತದ 1818 ರಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಸೇತುವೆಯನ್ನ ಕಟ್ಟಲಾಗಿತ್ತು. 200 ವರ್ಷಗಳ ಹಿಂದೆ ಕಟ್ಟಿದ್ದ ಸೇತುವೆಗೆ  ಪರ್ಯಾಯವಾಗಿ ಮತ್ತೊಂದು ಸೇತುವೆ ನಿರ್ಮಾಣಗೊಂಡಿದೆಯಾದರೂ ಈ ಸೇತುವೆ ಮೂಲಕವೇ ಅನೇಕ ಪ್ರವಾಸಿಗರು ಭರಚುಕ್ಕಿಗೆ ತೆರಳಲು ಇಚ್ಛಿಸುತ್ತಿದ್ದರು.

ಸಂಪೂರ್ಣವಾಗಿ ಕಲ್ಲಿನಿಂದಲೇ ಕಟ್ಟಿರುವ ವೆಸ್ಲಿ ಸೇತುವೆ ಬಳಿ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ಕಳೆದ ಮೂರು ದಿನದಿಂದ ಪ್ರವಾಸಿಗರಿಗೆ ಸ್ಥಳೀಯ ಆಡಳಿತ ನಿರ್ಬಂಧ ಹೇರಿತ್ತು. ಒಂದು ವೇಳೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿದ್ದರೆ ಭಾರೀ ಅನಾಹುತವೇ ಸಂಭವಿಸುವುದರಲ್ಲಿ ಅನುಮಾನವೇ ಇಲ್ಲದಂತಾಗಿದೆ.  ಪ್ರವಾಸಿಗರನ್ನ ಆಕರ್ಷಿಸಿ, ಕೈ ಬೀಸಿ ಕರೆಯುತ್ತಿದ್ದ ಚಾಮರಾಜನಗರ ಜಿಲ್ಲೆಯ ಐತಿಹಾಸಿಕ ವೆಸ್ಲಿ ಸೇತುವೆ ಕಾವೇರಿ ಸೆಳತಕ್ಕೆ ಇದೀಗ ಇತಿಹಾಸದ ಪುಟ ಸೇರಿದೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments